Friday, June 20, 2025
Homeರಾಜ್ಯಕದನ ವಿರಾಮದ ಬಗ್ಗೆ ಪ್ರಧಾನಿ ನಿಲುವಿನ ಕುರಿತು ಅನೇಕ ಸಂಶಯಗಳಿವೆ : ದಿನೇಶ್ ಗುಂಡೂರಾವ್

ಕದನ ವಿರಾಮದ ಬಗ್ಗೆ ಪ್ರಧಾನಿ ನಿಲುವಿನ ಕುರಿತು ಅನೇಕ ಸಂಶಯಗಳಿವೆ : ದಿನೇಶ್ ಗುಂಡೂರಾವ್

There are many doubts about the Prime Minister's stance on the ceasefire: Dinesh Gundu Rao

ಬೆಂಗಳೂರು, ಜೂ.19-ಪಾಕಿಸ್ತಾನದ ವಿರುದ್ಧ ಕದನ ವಿರಾಮ ಘೋಷಿಸಿದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಿಲುವಿನ ಬಗ್ಗೆ ಅನೇಕ ಸಂಶಯಗಳಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಸತ್ತಿನ ವಿಶೇಷ ಅಧಿವೇಶನ ಕರೆದು ಪ್ರಧಾನಿಯವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ಜೊತೆಗೆ ಕದನ ವಿರಾಮ ವಿಚಾರದಲ್ಲಿ ಅಮೆರಿಕ ಪಾತ್ರವೇನಿತ್ತು? ಎಂದು ದೇಶದ ಜನರಿಗೆ ತಿಳಿಸಬೇಕು. ಈ ಧೈರ್ಯ ಮೋದಿಯವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಜೊತೆಗೆ ಪ್ರಧಾನಿ ಮೋದಿ ದೂರವಾಣಿ ಸಂಭಾಷಣೆ ನಡೆಸಿದ್ದಾರಂತೆ. ಈ ವೇಳೆ ಭಾರತ ಯಾರ ಮಧ್ಯಸ್ಥಿಕೆಯನ್ನು ಒಪ್ಪಲ್ಲ ಎಂದು ಮೋದಿ ಅವರು ಟ್ರಂಪ್ ಅವರಿಗೆ ಕಡ್ಡಿ ಮುರಿದಂತೆ ಹೇಳಿದ್ದಾರಂತೆ.

ಹೀಗಂತ ಹೇಳಿರುವುದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ. ಆದರೆ ವಿಕ್ರಮ್ ಮಿಸ್ತ್ರಿ ಹೇಳಿಕೆಯನ್ನು ಯಾವ ಆಧಾರದಲ್ಲಿ ನಂಬುವುದು? ಯಾಕೆಂದರೆ ಮಿಸ್ತ್ರಿ ಈ ಹೇಳಿಕೆ ಕೊಟ್ಟ ಬೆನ್ನಲ್ಲೇ ಟ್ರಂಪ್ ನನ್ನ ಮಧ್ಯಸ್ಥಿಕೆಯಲ್ಲೇ ಕದನ ವಿರಾಮ ಏರ್ಪಟಿತ್ತು ಎಂದು ಪುನರುಚ್ಚರಿಸಿದ್ದಾರೆ. ಜೊತೆಗೆ ಪೆಹಲ್ಲಾಮ್ ಉಗ್ರ ಕೃತ್ಯದ ರೂವಾರಿ ಹಾಗೂ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್ಗೆಗೆ ಔತಣಕೂಟ ಏರ್ಪಡಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

RELATED ARTICLES

Latest News