Friday, June 20, 2025
Homeರಾಜ್ಯವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳವನ್ನು ಸಮರ್ಥಿಸಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್

Minister Lakshmi Hebbalar defends increase in minority reservation in housing schemes

ಬೆಂಗಳೂರು,ಜೂ.20– ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿರುವುದು ಕೇಂದ್ರ ಸರ್ಕಾರದ ಆದೇಶ. ರಾಜ್ಯಸರ್ಕಾರ ಅದನ್ನು ಅನುಮೋದಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸದಾಕಾಲ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವುದರಲ್ಲಿ ನಿಸ್ಸಿಮರು. ಅಲ್ಪಸಂಖ್ಯಾತರಿಗೆ ಮನೆ ನೀಡುವಾಗ ಮೀಸಲಾತಿ ನೀಡಲು ಕೇಂದ್ರ ಸರ್ಕಾರವು ಕಾನೂನು ರೂಪಿಸಿದೆ. ಅದನ್ನು ನಾವು ಜಾರಿ ಮಾಡುತ್ತಿದ್ದೇವೆ. ಆದರೆ ಈ ವೇಳೆ ಕಾಂಗ್ರೆಸ್ ಸರ್ಕಾರ ತುಷ್ಟಿಕರಣಕ್ಕಾಗಿ ಮುಸ್ಲಿಂ ಓಲೈಕೆಯಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿ ಜನರ ದಾರಿ ತಪ್ಪಿಸುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ಸದಾಕಾಲ ಜನರ ಭಾವನೆಗಳ ಜೊತೆ ಆಟವಾಡುತ್ತಿದೆ. ಅವರಿಗೆ ಮಾತನಾಡಲು ಬೇರೆ ವಿಚಾರಗಳಿಲ್ಲ. ಅದಕ್ಕಾಗಿ ಪ್ರತಿ ವಿಚಾರದಲ್ಲೂ ಜನರ ದಿಕ್ಕು ತಪ್ಪಿಸಲು ಹುಚ್ಚಾಟವಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.ಉಡುಪಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬರುವ ನಿರೀಕ್ಷೆ ಇದೆ. ಇದಕ್ಕಾಗಿ ಮಳೆ ಅವಾಂತರಗಳನ್ನು ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಳೆದ ತಿಂಗಳು ಪ್ರತ್ಯೇಕ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಈ ಮೊದಲಿಗಿಂತಲೂ ಉತ್ತಮ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸುತ್ತೇವೆ ಎಂದು ಹೇಳಿದರು.
ಮನೆಗಳ ಹಂಚಿಕೆಗೆ ಲಂಚ ಪಡೆಯಲಾಗಿದೆ ಎಂಬ ಬಿ.ಆರ್.ಪಾಟೀಲ್‌ರವರ ಟೀಕೆಗೆ ಖುದ್ದು ಅವರ ಬಳಿಯೇ ಚರ್ಚೆ ಮಾಡಿ ಪ್ರತಿಕ್ರಿಯಿಸಿದ್ದಾಗಿ ಹೇಳಿದರು.

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ. ಬಾಯಿ ಬಿಟ್ಟರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುತ್ತಾರೆ. ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎಂದು ಇಡೀ ಕರ್ನಾಟಕದ ಜನರಿಗೆ ಗೊತ್ತಿದೆ. ಸುಳ್ಳನ್ನು ಸತ್ಯ ಮಾಡುವಲ್ಲಿ ನಿಪುಣರು ಎಂದರು.
ಚಕ್ರವರ್ತಿ ಸೂಲಿಬೆಲೆಯಿಂದ ನಾವು ಪಾಠ ಕಲಿಯಬೇಕಿಲ್ಲ.

ಆತನ ಪ್ರವಾಸ ಉಡುಪಿ ಜಿಲ್ಲೆಯಲ್ಲಿ 3 ದಿನಗಳ ಕಾಲ ಇತ್ತು. ಇದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಯವರ ಗಮನಕ್ಕೆ ಬಂದಾಗ ಕೋಮು ಸೌಹಾರ್ದತೆಗೆ ಧಕ್ಕೆ ತರದಂತೆ ನಿರ್ಬಂಧ ಹೇರಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಉಡುಪಿ ಜಿಲ್ಲೆಯ ಜನ ಶಾಂತಿಪ್ರಿಯರು. ಇಲ್ಲಿ ಸೌಹಾರ್ದತೆ ಕಾಣುವ ಪ್ರಯತ್ನಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಉಳಿದಂತೆ ಯಾರ ಸ್ವಾತಂತ್ರಕ್ಕೂ ನಾವು ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.

ಬಿಜೆಪಿಯವರು ತಾವು ಕೋಮುವಾದ ಮಾಡುವುದಿಲ್ಲ ಎಂದು ಹೇಳುತ್ತಲೇ ಪ್ರಚೋದನಾಕಾರಿ ಭಾಷಣ ಮಾಡುತ್ತಾರೆ. ಮತ್ತೊಂದು ಕಡೆ ಕೋಮುನಿಗ್ರಹ ದಳಕ್ಕೆ ಅಡ್ಡಿಪಡಿಸುತ್ತಿದ್ದಾರೆ. ತಪ್ಪೇ ಮಾಡದಿದ್ದ ಮೇಲೆ ನಿಗ್ರಹ ದಳಕ್ಕೆ ಭಯ ಬೀಳುವುದೇಕೆ? ಎಂದು ಹೇಳಿದರು.

RELATED ARTICLES

Latest News