ಬೆಂಗಳೂರು,ಜೂ.20- ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾಗಿದ್ದ ಪದಭೂಷಣ ಡಾ.ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರು ಹಾಕಿಕೊಟ್ಟ ಮಾರ್ಗದರ್ಶನದಲ್ಲೇ ಶ್ರೀಮಠವು ಆರೋಗ್ಯ, ಆಧ್ಯಾತಿಕ ಸಾಂಸ್ಕೃತಿಕ ಕ್ಷೇತ್ರದಲ್ಲೂ ಮಹತ್ತರ ಸೇವೆಯನ್ನು ಸಲ್ಲಿಸುತ್ತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಷಾ ಬಿಜಿಎಸ್ ಟ್ರಸ್ಟ್ನ ಕೊಡುಗೆಯನ್ನು ಕೊಂಡಾಡಿದರು.
ಬೆಂಗಳೂರು ಉತ್ತರ ತಾಲ್ಲೂಕಿನ ನಗರೂರಿನಲ್ಲಿ ಬಿಜಿಎಸ್ ಎಂಸಿಎಚ್ ಆವರಣದಲ್ಲಿ ನೂತವಾಗಿ ಆರಂಭಿಸಿರುವ ಆದಿಚುಂಚನಗಿರಿ ವಿವಿ ಮತ್ತು ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನನಗೆ ಕನ್ನಡ ಮಾತನಾಡಲು ಬರುವುದಿಲ್ಲ. ಇದಕ್ಕಾಗಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಬಳಿ ಕ್ಷಮೆ ಕೋರುತ್ತೇನೆ ಎಂದು ತಮ ಮಾತು ಆರಂಭಿಸಿದ ಅಮಿತ್ ಷಾ, ಮಾತಿನುದ್ದಕ್ಕೂ ಆದಿಚುಂಚನಗಿರಿ ಪೀಠದ ಸಮಾಜ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವಕಾಶ ನೀಡಿದ ಸ್ವಾಮೀಜಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ ಮಾಡಿದ್ದಾರೆ. ಈ ವಿಶಾಲ ಪ್ರದೇಶದಲ್ಲಿ ದೊಡ್ಡ ಆಸ್ಪತ್ರೆ ನಿರ್ಮಿಸಿದ್ದು ಬಡವರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ. ಕೋಟ್ಯಂತರ ರೂ. ವೆಚ್ಚದಲ್ಲಿ ನೂತನ ಆಸ್ಪತ್ರೆ ನಿರ್ಮಿಸಲಾಗಿದೆ. 1000 ಹಾಸಿಗೆಯುಳ್ಳ ಸೂಪರ್ ಸ್ಪೆಷಲ್ ಆಸ್ರತ್ರೆಯಲ್ಲಿ ಬಡವರಿಗೆ ಉಚಿತವಾಗಿ ಹಾಗೂ ಕಡಿಮೆ ದರದಲ್ಲಿ ಚಿಕಿತ್ಸೆ ನೀಡುತ್ತಿರುವುದು ಮತ್ತಷ್ಟು ಸಂತೋಷವಾಗಿದೆ ಎಂದರು.
ಹಿರಿಯ ಶ್ರೀಗಳ ಕಾಲದಿಂದಲೂ ಮಠದ ಸೇವಾ ಕಾರ್ಯ ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದಿಚುಂಚನಗಿರಿಯ ಪವಿತ್ರ ಮಠದಲ್ಲಿ ಆಧ್ಯಾತಿಕ ಪರಂಪರೆ ಮತ್ತಷ್ಟು ಉಜ್ವಲಗೊಂಡಿದೆ. ಸೇವೆ, ಶಿಕ್ಷಣ, ಸಮರ್ಪಣೆ ಯು 1800 ವರ್ಷಗಳಿಂದಲೂ ಮುಂದುವರೆದಿದೆ. ನಿರ್ಮಲಾನಂದನಾಥ ಶ್ರೀಗಳು ಈ ಪರಂಪರೆಯನ್ನು ಮತ್ತಷ್ಟು ಉತ್ತುಂಗಕ್ಕೊಯ್ದಿದ್ದಾರೆ. ಆಧ್ಯಾತಿಕತೆ, ಸಂಸ್ಕೃತಿ ಕ್ಷೇತ್ರದಲ್ಲಿ ಮಹತ್ವದ ಸೇವೆ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಮಕ್ಕಳಿಂದ ದೊಡ್ಡವರವರೆಗೂ ಸೇವೆ ಮಾಡಲಾಗುತ್ತಿದೆ. ಅನಾಥಾಲಯ, ವೃದ್ಧಾಶ್ರಮ, ಚಿಕಿತ್ಸಾಲಯಗಳನ್ನು ಮಠ ತೆರೆದಿದೆ. ಹಿರಿಯ ಶ್ರೀಗಳ ಮಾರ್ಗದಲ್ಲಿ ನಿರ್ಮಲಾನಂದನಾಥ ಶ್ರೀಗಳು ಮುನ್ನಡೆಯುತ್ತಿದ್ದಾರೆ ಎಂದರು.
7 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ಕೇಂದ್ರ ಸರ್ಕಾರದಿಂದ ಸಿಗುತ್ತಿದೆ. ಪ್ರಧಾನಿ ನರೇಂದ್ರಮೋದಿಯವರು 26 ವರ್ಷಗಳ ಹಿಂದೆಯೇ ಬಡವರ ಆರೋಗ್ಯ ವೆಚ್ಚದ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದರು. 12 ಕೋಟಿ ಮನೆಗಳಿಗೆ ಶೌಚಾಲಯ ವ್ಯವಸ್ಥೆ, ಮಿಷನ್ ಇಂದ್ರಧನುಷ್ ಮೂಲಕ 15 ವರ್ಷಗಳವರೆಗಿನ ಮಕ್ಕಳಿಗೆ ಲಸಿಕೆ, ಆಯುಷಾನ್ ಭಾರತ್ ಮೂಲಕ 5 ಲಕ್ಷ ರೂ.ವರೆಗೆ ಆರೋಗ್ಯ ವಿಮೆ ಇತ್ಯಾದಿ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಕೇಂದ್ರ ಜಾರಿಗೊಳಿಸಿದೆ. ವೈದ್ಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲೂ ಕ್ರಮವಹಿಸಿದೆ. ವೈದ್ಯಕೀಯ ಕಾಲೇಜುಗಳ ಸಂಖ್ಯೆ 780ಕ್ಕೇರಿದೆ. 1.80 ಲಕ್ಷ ಸೀಟುಗಳು ದೇಶದ ಮೆಡಿಕಲ್ ಕಾಲೇಜುಗಳಲ್ಲಿ ಲಭ್ಯ ಇವೆ. 74 ಸಾವಿರ ಪಿಜಿ ಸೀಟುಗಳು ಲಭ್ಯ ಇವೆ ಎಂದು ಕೇಂದ್ರ ಸರ್ಕಾರದ ಸಾಧನೆಗಳ ಪಟ್ಟಿ ನೀಡಿದರು.
1 ಲಕ್ಷಕ್ಕೂ ಅಧಿಕ ಎಂಬಿಬಿಎಸ್ ವೈದ್ಯರು ಪ್ರತಿವರ್ಷ ಪಾಸಾಗಿ ಹೊರ ಬರುತ್ತಿದ್ದಾರೆ. 70,000ಕ್ಕೂ ಅಧಿಕವಾದ ಡಬಲ್ ಡಿಗ್ರಿ ವೈದ್ಯರು ಪಾಸಾಗಿ ಹೊರ ಬರುತ್ತಿದ್ದಾರೆ. ಆರೋಗ್ಯ ಸೇವೆ ಜೊತೆಗೆ ಅನೇಕ ಯೋಜನೆಗಳನ್ನು ಪ್ರಧಾನಿ ಮೋದಿ ಅವರು ನೀಡಿದ್ದಾರೆ. ಸ್ವಸ್ಥ ಭಾರತ ನಿರ್ಮಾಣದ ಕಡೆಗೆ ಹೆಜ್ಜೆ ಹಾಕಿದ್ದಾರೆ ಎಂದು ಷಾ ಹೇಳಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗೆ ನಾವು ಅಭಿನಂದನೆ ಸಲ್ಲಿಸಬೇಕಾಗುತ್ತದೆ. 60ರ ದಶಕದಲ್ಲಿ ವೈದ್ಯಕೀಯ ಕ್ಷೇತ್ರ ಬೆಳೆಯಲು ನಮ ಪೂರ್ವಜರು ಬುನಾದಿ ಹಾಕಿದ್ದರು ಎಂದು ಸರಿಸಿದರು.
ಕರ್ನಾಟಕದಲ್ಲಿ 70 ಖಾಸಗಿ ವೈದ್ಯಕೀಯ ಕಾಲೇಜುಗಳಿವೆ. ಭಾರತ ಇಂದು ವೈದ್ಯಕೀಯ ಕಾಲೇಜು ಬೆಳವಣಿಗೆಗೆ ಹೆಚ್ಚು ಒತ್ತು ನೀಡುತ್ತದೆ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಒಟ್ಟು ಮೂರು ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಿದ್ದಾರೆ ಎಂದು ಕೊಂಡಾಡಿದರು.
ಕೇಂದ್ರ ಬೃಹ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ಕೇಂದ್ರ ನಾಯಕ ಅಮಿತ್ ಷಾ ಅವರು ಕೇಂದ್ರದ ಡೈನಾಮಿಕ್ ಲೀಡರ್. ನಮ ಲೀಡರ್ ಅಮಿತ್ ಶಾ ಅವರಿಗೆ ಸ್ವಾಗತ ಎಂದು ಭಾಷಣಕ್ಕೂ ಮೊದಲು ಅಮಿತ್ ಶಾ ಅವರನ್ನು ಹಾಡಿಹೊಗಳಿದರು.
ಆದಿಚುಂಚನಗಿರಿ ಮಠ ಅನೇಕ ನಾಯಕರಿಗೆ ಅನುಕೂಲ ಮಾಡಿಕೊಟ್ಟಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶ್ರೀ ಮಠ ಶ್ಲಾಘನೀಯ ಸೇವೆಯನ್ನು ಮಾಡುತ್ತಿದೆ. ಬಡವರ ಮನೆಗಳಲ್ಲಿ ಅಕ್ಷರದ ಬೆಳಕು ಕಾಣಲು ಶ್ರೀಮಠದ ಸೇವೆ ಕಾರಣ ಎಂದರು. ಚಿತ್ರದುರ್ಗದ ಮಾದಾರ ಪೀಠದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಒಳ ಮೀಸಲಾತಿ ಗೊಂದಲಕ್ಕೆ ಅಮಿತ್ ಶಾ ಅವರು ತೆರೆ ಎಳೆಯಬೇಕು. ಶೋಷಿತ ಸಮುದಾಯಗಳ ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ನಮಂಥ ಕೆಳ ಸಮುದಾಯಗಳನ್ನು ಕೈ ಹಿಡಿದು ಬೆಳೆಸಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ, ಈಗ ಕೇಂದ್ರ ಸಚಿವರಾಗಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.
ಹಲವು ವರ್ಷಗಳಿಂದ ನಮ ಸಮಾಜ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದೆ. ಮಾದಿಗ ಸಮಾಜ ಬಹಳ ಹಿಂದುಳಿದಿದೆ. ಅದಕ್ಕಾಗಿ ನ್ಯಾಯ ಕೊಡಬೇಕು. ಮೀಸಲಾತಿ ವರ್ಗೀಕರಣ ಆಗಬೇಕು. ನರೇಂದ್ರ ಮೋದಿ, ಅಮಿತ್ ಶಾ ಭರವಸೆ ಕೊಟ್ಟಿದ್ದರು. ಆದರೆ ಕಾರಣಾಂತರಗಳಿಂದ ಅದು ಮುಂದೆ ಹೋಗಿದೆ.
ಈಗ ಅಮಿತ್ ಶಾ ಅವರು ಸದಾ ನಮ ಜೊತೆ ಇರುವ ಬಗ್ಗೆ ಹೇಳಿದ್ದಾರೆ. ಶೋಷಿತ ಸಮಾಜಗಳ ಬೇಡಿಕೆ ಈಡೇರಿಸುವ ಭರವಸೆ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
- ದ್ವೇಷ ರಾಜಕಾರಣಕ್ಕೆ ಕಾಲವೇ ಉತ್ತರ ನೀಡಲಿದೆ : ಹೆಚ್ಡಿಕೆ
- ಲಿವಿಂಗ್ ಟು ಗೆದರ್ ಸಹವಾಸ : ಮಗುವಿಗೆ ಜನ ನೀಡಿ ಪ್ರಾಣ ಬಿಟ್ಟ ಯುವತಿ
- ಮಾವಿಗೆ ಬೆಂಬೆಲ ಬೆಲೆ ಘೋಷಿಸಲು ಸಚಿವ ಕೆ.ಹೆಚ್.ಮುನಿಯಪ್ಪ ಒತ್ತಾಯ
- ವ್ಯಾಪಕ ಚರ್ಚೆ ಕಾರಣವಾಯ್ತು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್ ರಾಜೀನಾಮೆ
- ಜಮೀರ್ ರಾಜೀನಾಮೆಗೆ ಶರವಣ ಆಗ್ರಹ