ಬೆಂಗಳೂರು, ಜೂ.26- ರಾಜ್ಯದಲ್ಲಿ ಅಧಿಕಾರ ಕೇಂದ್ರಿತ ಸ್ಥಾನಗಳು ಹೆಚ್ಚಾಗಿವೆ. ಹೀಗಾಗಿ ಜಂಜಾಟಗಳು ಹೆಚ್ಚಾಗಿವೆ. ನವೆಂಬರ್ ವೇಳೆಗೆ ಮಹತ್ವದ ಬದಲಾವಣೆಯಾಗಲಿದ್ದು, ಎಲ್ಲವೂ ಸರಿಹೋಗಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013-2018 ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರ ಖದರ್ ಈಗ ಕಾಣುತ್ತಿಲ್ಲ ಎಂಬುದು ಜನರ ಅಭಿಪ್ರಾಯ. ಇದಕ್ಕೆ ಕಾಂಗ್ರೆಸ್ನಲ್ಲಿರುವ ಪವರ್ ಸೆಂಟರ್ಗಳೇ ಕಾರಣ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದರು.
1,2,3,4 ಹೀಗೆ ಎಷ್ಟು ಬೇಕಾದರೂ ಪವರ್ ಸೆಂಟರ್ಗಳನ್ನು ಕಾಂಗ್ರೆಸ್ನಲ್ಲಿ ಲೆಕ್ಕ ಹಾಕಬಹುದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಲ್ಲಿ ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ. ಆದರೆ ಜಂಜಾಟಗಳಂತೂ ಇದ್ದೇ ಇವೆ. ಆಗಸ್ಟ್ನಿಂದ ನವೆಂಬರ್ ನಡುವೆ ಎಲ್ಲವೂ ಸರಿಹೋಗಬಹುದು. ಬದಲಾವಣೆಯ ಸಣ್ಣ ಸುಳಿಗಾಳಿ ಬೀಸುತ್ತಿದೆ ಎಂದು ಹೇಳಿದರು.
ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗಿದೆ. ಆದರೆ ಹಣಕಾಸಿನ ಮುಗ್ಗಟ್ಟಿಲ್ಲ. ತಿಂಗಳಲ್ಲಿ 15 ರಿಂದ 20 ದಿನ ಮುಖ್ಯಮಂತ್ರಿಯವರು ಜಿಲ್ಲಾ ಪ್ರವಾಸ ಮಾಡಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿದ್ದಾರೆ. ಹಣ ಇಲ್ಲದೇ ಇದ್ದರೆ ಈ ರೀತಿ ಕಾಮಗಾರಿ ಆರಂಭಿಸಲು ಸಾಧ್ಯವೇ? ಎಂದರು.
ಶಾಸಕರ ನಿರೀಕ್ಷೆಗೆ ಅನುಗುಣವಾಗಿ ಅನುದಾನ ಸಿಗದೇ ಇರಬಹುದು. ಆದರೆ ಸಿದ್ದರಾಮಯ್ಯ ಶಕ್ತಿ ಮೀರಿ ಪಕ್ಷಬೇಧ ಮರೆತು ಎಲ್ಲಾ ಶಾಸಕರ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದಾರೆ ಎಂದು ಹೇಳಿದರು.
- ಚೀನಾದಲ್ಲಿ ಪ್ರವಾಹಕ್ಕೆ ಆರು ಮಂದಿ ಬಲಿ
- ಸಂಸತ್ಗಿಂತ ಸಂವಿಧಾನವೇ ಸರ್ವೋಚ್ಚ : ಸಿಜೆಐ ಬಿ.ಆರ್. ಗವಾಯಿ
- 50 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಪೊಲೀಸರು
- ರಕ್ಷಣಾ ಸ್ವಾವಲಂಬನೆಗೆ ಒತ್ತು : ಪ್ರಧಾನಿ ಮೋದಿ
- ಅಧ್ಯಕ್ಷರು, ಸಚಿವರ ಬದಲಾವಣೆ : ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಗರಿಗೆದರಿದ ಚರ್ಚೆ