Monday, June 30, 2025
Homeರಾಜ್ಯಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು

Miscreants cut off cow's udder

ಶಿವಮೊಗ್ಗ, ಜೂ.29- ಮೇಯಲು ಹೋಗಿದ್ದ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಹೊಸನಗರ ತಾಲೂಕಿನ ಬಿಜಾಪುರ ಗ್ರಾಮದಲ್ಲಿ ನಡೆದಿದೆ. ವಿಜಯಕುಮಾರ್‌ ಎಂಬ ರೈತನ ಹಸುವನ್ನು ಮೇಯಲು ಕಳುಹಿಸಿದ್ದಾಗ ದುಷ್ಕರ್ಮಿಗಳು ಈ ಹೇಯಕೃತ್ಯ ನಡೆಸಿದ್ದಾರೆ.

ರಕ್ತ ಸುರಿಸಿಕೊಂಡು ಮನೆಗೆ ಬಂದ ಹಸುವನ್ನು ನೋಡಿದ ಕುಟುಂಬಸ್ಥರು ಕೂಡಲೇ ಪಶು ವೈದ್ಯರನ್ನು ಕರೆದು ಚಿಕಿತ್ಸೆ ಕೊಡಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಹಲವೆಡೆ ಇಂತಹ ಕೃತ್ಯಗಳು ನಡೆಯುತ್ತಿದ್ದು, ರೈತರು ಆತಂಕಗೊಳ್ಳುತ್ತಿದ್ದಾರೆ.

RELATED ARTICLES

Latest News