ಚೆನ್ನೈ, ಜು.1- ತಮಿಳುನಾಡಿನ ಶಿವಕಾಶಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಏಳು ಮಂದಿ ಬಲಿಯಾಗಿದ್ದಾರೆ.ಶಿವಕಾಶಿಯ ಚಿನ್ನಕಾಮನಪಟ್ಟಿಯಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದು ಸಾವಿ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆ ಗಾಗಿ ವಿರುಧುನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ.ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ವಿರುಧುನಗರ ಜಿಲ್ಲಾ ಎಸ್ಪಿ ಕಣ್ಣನ್ ತಿಳಿಸಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-08-2025)
- ಪಾಕ್ ಪ್ರವಾಹದಲ್ಲಿ 220 ಜನ ಬಲಿ
- ಇಂಡೋನೇಷ್ಯಾದ ಸುಲಾವೆಸಿ ದ್ವೀಪದಲ್ಲಿ 5.8 ತೀವ್ರತೆಯ ಭೂಕಂಪ
- ಪೀಣ್ಯ ಫ್ಲೈ ಓವರ್ ಮೇಲೆ ಅಪಘಾತ, ಗ್ಯಾಸ್ ಸಿಲಿಂಡರ್ ಡೆಲಿವರಿ ಬಾಯ್ ಸಾವು
- ಧರ್ಮಸ್ಥಳದ ಅಪಪ್ರಚಾರ ಪಿತೂರಿ ಮಾಡಿದವರ ವಿರುದ್ಧ ತನಿಖೆಗೆ ಬಿವೈವಿ ಆಗ್ರಹ