ಬೆಂಗಳೂರು, ಜು.2- ಹಾಸನದಲ್ಲಿ ಹಲವಾರು ಮಂದಿ ಹೃದಯಘಾತದಿಂದ ಮೃತಪಟ್ಟಿರುವುದಕ್ಕೆ ಅತಿಯಾದ ತೂಕ ಹಾಗೂ ರೆಡ್ ಮೀಟ್ ಸೇವನೆ ಕಾರಣ ಇರಬಹುದು ಎಂದು ತಜ್ಞ ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಸಂಭವಿಸಿದ ಸಾಲು ಸಾಲು ಸಾವುಗಳಿಗೆ ಕಾರಣ ಪತ್ತೆ ಹಚ್ಚಲು ಸರ್ಕಾರ ನೇಮಿಸಿರುವ ತಾಂತ್ರಿಕ ಸಮಿತಿಯ ಸದಸ್ಯರು ಇಂತಹ ಅನುಮಾನ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ಸಮಿತಿಯ ತಪಾಸಣೆ ವೇಳೆ ಇಂತಹ ಶಾಕಿಂಗ್ ವಿಚಾರ ಬಯಲಾಗಿದ್ದು, ಮೇಲ್ನೋಟಕ್ಕೆ ಹಾಸನದ ಪ್ರಕರಣಗಳಿಗೆ ಇದೇ ಮುಖ್ಯ ಕಾರಣ ಎನ್ನಲಾಗಿದೆ. ಅತಿಯಾದ ತೂಕ, ರೆಡ್ ಮೀಟ್ ಸೇವನೆಯಿಂದ ಸಾವು ಸಂಭವಿಸ್ತಾ ಈ ಬಗ್ಗೆ ಸಂಪೂರ್ಣ ಅಧ್ಯಯನ ನಡೆಸಲಾಗುತ್ತಿದೆ ಎಂದು ಜಯದೇವ ಆಸ್ಪತ್ರೆಯ ಮುಖ್ಯಸ್ಥರಾಗಿರುವ ಡಾ. ರವೀಂದ್ರ ಅವರು ತಿಳಿಸಿದ್ದಾರೆ.
ಅತಿಯಾದ ಬೊಜ್ಜು, ಮಾಂಸ ಸೇವನೆ ಹಾಗೂ ಮದ್ಯಪಾನದಿಂದ ಸಾವು ಸಂಭಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ರೆಡ್ ಮೀಟ್ ಸೇವನೆಯಿಂದ ಕೊಲೆಸ್ಟ್ರಾಲ್ ಬಂದು ಅದು ಅನ್ ಕಂಟ್ರೋಲ್ಡ್ ಕೊಲೆಸ್ಟ್ರಾಲ್ ಕಾರಣವಾಗಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
- ಬೆಟ್ಟ ಹತ್ತಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಗುಡ್ ನ್ಯೂಸ್
- ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ
- ದೆಹಲಿ : ಕೆಲಸಕ್ಕಿದ್ದವನಿಂದಲೆ ತಾಯಿ-ಮಗನ ಹತ್ಯೆ
- ಪಾಕ್ ಸೆಲೆಬ್ರಿಟಿಗಳ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ಪ್ರೊಫೈಲ್ಗಳನ್ನು ಮತ್ತೊಮ್ಮೆ ನಿರ್ಬಂಧಿಸಿದ ಭಾರತ
- ಇಂಡೋನೇಷ್ಯಾದ ಬಾಲಿ ಬಳಿ ದೋಣಿ ಮುಳುಗಿ 43 ಜನ ನಾಪತ್ತೆ