ಜಕಾರ್ತಾ, ಜು.3-ಇಂಡೋನೇಷ್ಯಾದ ರೆಸಾರ್ಟ್ ದ್ವೀಪವಾದ ಬಾಲಿ ಬಳಿ 65 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಕಳೆದ ರಾತ್ರಿ ಮುಳುಗಿದೆ.ತಡರಾತ್ರಿ ಪೂರ್ವ ಜಾವಾದ ಕೇತಪಾಂಗ್ ಬಂದರಿನಿಂದ ಹೊರಟ ಕೆಎಂಪಿ ತುನು ಪ್ರತಮ ಜಯ ಹೆಸರಿನ ದೋಣಿ ಸುಮಾರು ಅರ್ಧ ಗಂಟೆಯ ನಂತರ ಮುಳುಗಿದೆ ಎಂದು ರಾಷ್ಟ್ರೀಯ ಶೋಧ ಮತ್ತು ರಕ್ಷಣಾ ಸಂಸ್ಥೆ ತಿಳಿಸಿದೆ.
ದೋಣಿಯಲ್ಲಿ 53 ಪ್ರಯಾಣಿಕರು, 12 ಸಿಬ್ಬಂದಿ ಮತ್ತು 14 ಟ್ರಕ್ಗಳು ಸೇರಿದಂತೆ 22 ವಾಹನಗಳು ಇದ್ದವು ಎಂದು ವರದಿಯಾಗಿದೆ.ಇದು 50 ಕಿಲೋಮೀಟರ್ ಪ್ರಯಾಣದ ಬಾಲಿಯ ಗಿಲಿಮನುಕ್ ಬಂದರಿಗೆ ಹೋಗುತ್ತಿತ್ತು ಎಂದು ಅಧಕಾರಿಗಳು ತಿಳಿಸಿದ್ದಾರೆ.
ರಾತ್ರಿಯಿಡೀ ರಕ್ಷಣಾ ತಂಡವು ಪ್ರಕ್ಷುಬ್ಧ ಸಮುದ್ರದಲ್ಲಿ ಕಾಣೆಯಾದ ಜನರನ್ನು ಹುಡುಕುತ್ತಿದೆ. ಕೆಲವರು ಈಜಿಕೊಂಡು ದಡ ಸೇರಿದ್ದು ಸುಮಾರು 43 ಪ್ರಯಾಣಿಕರು ಕಾಣೆಯಾಗಿದ್ದಾರೆ.
- ಸಸ್ಯಕಾಶಿ ಲಾಲ್ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ
- ಉತ್ತರ ಪ್ರದೇಶದ ಮಾಜಿ ಶಾಸಕರ ವಿರುದ್ಧ ಬೆಂಗಳೂರಲ್ಲಿ ರೇಪ್ ಕೇಸ್ ದಾಖಲು
- ಹೆಚ್ಚುತ್ತಿರುವ ಹೃದಯಾಘಾತಗಳ ಕುರಿತು ಜನ ಆತಂಕಕ್ಕೊಳಗಾಗಬಾರದು : ಶರಣಪ್ರಕಾಶ್ ಪಾಟೀಲ್
- ಅಧಿಕಾರಿಗಳ ತಪ್ಪಿನಿಂದ ತಿರಸ್ಕೃತವಾದ ಬಗರ್ಹುಕುಂ ಅರ್ಜಿ ಪರಿಶೀಲನೆ : ಸಚಿವ ಕೃಷ್ಣಭೈರೇಗೌಡ
- ದೆಹಲಿಯ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ