ಮೈಸೂರು,ಜು.3- ಸಾಲ ಬಾಧೆಯಿಂದ ಮನನೊಂದ ರೈತಯೊಬ್ಬರು ತುಂಬಸೋಗೆ ಸೇತುವೆಯಿಂದ ಹೊಳೆಗೆ ಹಾರಿ ಆತಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಾಲೂಕಿನ ಮುಳ್ಳೂರು ಗ್ರಾಮ ನಿವಾಸಿ ಗೋವಿಂದನಾಯಕ (50) ಮೃತಪಟ್ಟಿರುವ ವ್ಯಕ್ತಿ.
ಗೋವಿಂದನಾಯಕ ಸುಮಾರು 25 ವರ್ಷಗಳ ಹಿಂದೆ ಹೆಗ್ಗಡಪುರ ಗ್ರಾಮದಲ್ಲಿ ವಾಸವಾಗಿದ್ದು.ಇವರು ಕೆಲಸ ಮುಗಿಸಿಕೊಂಡು ಜಾನುವಾರುಗಳಿಗೆ 8 ಗಂಟೆ ಸಮಯಕ್ಕೆ ಹುಲ್ಲನ್ನು ತರುತ್ತೇನೆ ಎಂದು ಹೇಳಿ ಹೊರಗೆ ಹೋದವರು 11 ಗಂಟೆಯಾದರೂ ಮನೆಗೆ ವಾಪಸ್ಸು ಬಾರದೇ ನಾಪತ್ತೆಯಾಗಿದ್ದರು.
ನೇರವಾಗಿ ತಾಲೂಕಿನ ಸಮೀಪದ ತುಂಬಸೋಗೆ ಗ್ರಾಮದಲ್ಲಿರುವ ಕಬಿನಿ ಜಲಾಶಯದ ಹೊಳೆಯ ಮೇಲೆ ತನ್ನ ಸ್ಕೂಟರ್ನಲ್ಲಿ ತುಂಬಸೋಗೆ ಗ್ರಾಮದಲ್ಲಿರುವ ಸೇತುವೆ ಬಳಿ ತೆರಳಿದ ಅವರು, ಸೇತುವೆಯಲ್ಲಿಯೇ ಸ್ಕೂಟರ್ ನಿಲ್ಲಿಸಿ, ಮೇಲಿಂದ ಹೊಳೆಗೆ ಹಾರಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.
- ಬೈಕ್ ಅಪಘಾತದಲ್ಲಿ ಯೋಗ ಗುರು ವಚನಾನಂದ ಶ್ರೀಗಳ ಸಹೋದರ ಸಾವು
- ಹಾಸನದಲ್ಲಿ ನಿಲ್ಲದ ಹೃದಯಾಘಾತ ಸಾವಿನ ಸರಣಿ, ಮೃತರ ಸಂಖ್ಯೆ 31ಕ್ಕೆ ಏರಿಕೆ
- ಹೃದಯಘಾತಕ್ಕೆ ಕೊರೊನಾ ಲಸಿಕೆ ಕಾರಣ ಎಂಬ ಸಿಎಂ ಹೇಳಿಕೆ ತಪ್ಪು ; ಮಜುಂದಾರ್ ಶಾ
- ಮನೆ ಮಾಲಿಕನ ಮೇಲೆ ಹಲ್ಲೆ ನಡೆಸಿದ್ದ ಬಿಬಿಎಂಪಿ ಸಿಬ್ಬಂದಿಗಳ ಅಮಾನತು
- ಸಚಿವ ಕೆ.ಎನ್. ರಾಜಣ್ಣ ಅವರಿಗೆ ನೋಟಿಸ್ ನೀಡುವಂತೆ ಕಾಂಗ್ರೆಸ್ ಶಾಸಕರು ಆಗ್ರಹ