ಬೆಂಗಳೂರು,ಜು.4-ಸಾಲದ ಹಣವನ್ನು ವಾಪಸ್ ಕೇಳಿದ ಮಹಿಳೆಯ ಮನೆಗೆ ಬೆಂಕಿ ಹಚ್ಚಿರುವ ಘಟನೆ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ವಿವೇಕನಗರದ ನಿವಾಸಿ ವೆಂಕಟರಮಣಿ ಎಂಬುವವರ ಬಳಿ ಆರೋಪಿ ಸುಬ್ರಮಣಿಯ ಸಹೋದರಿ ಪಾರ್ವತಿ ತನ್ನ ಮಗಳ ಮದುವೆಗಾಗಿ 5 ಲಕ್ಷ ಹಣ ಪಡೆದಿದ್ದಾರೆ.
ಹಣ ಪಡೆದು ಹಲವು ವರ್ಷಗಳಾದರೂ ಹಿಂದಿರುಗಿಸಿಲ್ಲ. ಹಾಗಾಗಿ ವೆಂಕಟರಮಣಿಯವರು ಹಣ ವಾಪಸ್ ಕೊಡುವಂತೆ ಪಾರ್ವತಿ ಅವರಿಗೆ ಕೇಳಿದ್ದಾರೆ.ಇದರಿಂದ ಕೋಪಗೊಂಡು ಪಾರ್ವತಿ ಹಾಗೂ ಆಕೆಯ ಮಗಳು ಸೇರಿಕೊಂಡು ವೆಂಕಟರಮಣಿಯವರ ಜೊತೆ ಗಲಾಟೆ ಮಾಡಿದ್ದಾರೆ.
ಈ ವಿಷಯ ತಿಳಿದು ಆರೋಪಿ ಸುಬ್ರಮಣಿ ಕಳೆದ ಮೂರು ದಿನಗಳ ಹಿಂದೆ ವೆಂಕಟರಮಣಿಯವರ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.ಅದೃಷ್ಟವಶಾತ್ ಮನೆಯಲ್ಲಿದ್ದವರು ತಕ್ಷಣ ಹೊರಗೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಆರೋಪಿಯ ಈ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.ಘಟನೆ ಸಂಬಂಧ ವೆಂಕಟರಮಣಿ ಅವರ ಪುತ್ರ ವಿವೇಕನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (21-08-2025)
- ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ವಿಧಾನಪರಿಷತ್ನಲ್ಲಿ ಪಕ್ಷಬೇಧ ಮರೆತು ಆಗ್ರಹ
- ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು 73 ಜನ ಸಾವು
- ಅಮರಾವತಿ ನಿರ್ಮಾಣ ಹೊಣೆ ಸಿಂಗಾಪುರದ ಹೆಗಲಿಗೆ
- ಮೃತ ಕೆಎಸ್ಆರ್ಟಿಸಿ ನೌಕರರ ಕುಟುಂಬಕ್ಕೆ ಅಪಘಾತೇತರ ಪರಿಹಾರ ಹೆಚ್ಚಳ