ಚಿಕ್ಕಮಗಳೂರು, ಜು.5– ಇತ್ತೀಚಿಗೆ ಕಣ್ಮರೆಯಾಗಿದ್ದ ಅರಣ್ಯ ಇಲಾಖೆಯ ಗಾರ್ಡ್ ಶರತ್ನ ಮೃತದೇಹ ಪತ್ತೆಯಾಗಿದೆ.ಶರತ್ ಸಖರಾಯಪಟ್ಟಣದ ಸಮೀಪ ಹೊಸದಾಗಿ ನಿರ್ಮಾಣವಾಗುತ್ತಿರುವ ಟೋಲ್ ಗೇಟ್ ಬಳಿಯ ನೀಲಗಿರಿ ಫಾರೆಸ್ಟ್ ತೋಪಿನಲ್ಲಿ ಮೃತದೇಹ ಪತ್ತೆಯಾಗಿದೆ. ಶರತ್ನ ಮೃತದೇಹ ಸಂಪೂರ್ಣ ಕೊಳೆತು ಹೋಗಿದೆ.
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದು ಪತ್ತೆಗಾಗಿ ಪೊಲೀಸ್ ಮತ್ತು ಅರಣ್ಯ ಇಲಾಖೆಯವರು ತೀವ್ರ ಪ್ರಯತ್ನ ನಡೆಸಿದ್ದು ದ್ರೋಣ ಕ್ಯಾಮರಾ ಕೂಡ ಬಳಸಿದರೂ ಸುಳಿವು ಸಿಕ್ಕಿರಲಿಲ್ಲ. ಇಂದು ಹೆಚ್ಚು ಸಿಬ್ಬಂದಿಯೊಂದಿಗೆ ತಪಾಸಣೆ ನಡೆಸಿದ್ದು ದುರ್ವಾಸನೆ ಬಂದ ಕಡೆ ಹೋಗಿ ನೋಡಿದಾಗ ಶರತ್ನ ಮೃತದೇಹ ಪತ್ತೆಯಾಗಿದೆ.
ಕೊಡಗು ಮೂಲದ ಶರತ್ ಕಳೆದ ಆರು ತಿಂಗಳ ಹಿಂದೆ ಚಿಕ್ಕಮಗಳೂರು ಅರಣ್ಯ ವಿಭಾಗಕ್ಕೆ ವರ್ಗಾವಣೆಯಾಗಿ ಬಂದಿದ್ದು ಸದಾ ಕುಡಿತದ ಅಮಲಿನಲ್ಲಿ ಇರುತ್ತಿದ್ದ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
- ಸಪ್ತ ಸಾಗರದಾಚೆ ಕನ್ನಡನಾಡಿನ ಒಕ್ಕಲಿಗ ಸಂಸ್ಕೃತಿ-ಪರಂಪರೆಯ ಅದ್ಭುತ ಪ್ರದರ್ಶನ
- ಮಂಗಳೂರು : ಯುವತಿಯನ್ನು ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್
- ಆರೋಪಿಯ ವಿಚಾರಣೆ ವೇಳೆ ರಾಜಕೀಯ ನಾಯಕರ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
- ಪ್ರೀತಿ ವಿಷಯಕ್ಕೆ ಶಿಕ್ಷಕಿಯನ್ನು ಇರಿದು ಕೊಂದ ಯುವಕ
- ಲವ್ ಜಿಹಾದ್ ಮಾಸ್ಟರ್ ಮೈಂಡ್ ಕಾಂಗ್ರೆಸ್ ಕೌನ್ಸಿಲರ್ ವಿರುದ್ಧ ಪ್ರಕರಣ ದಾಖಲು