ಬೆಂಗಳೂರು, ಜು.6– ನಗರದಲ್ಲಿ ಆಗಾಗ್ಗೆ ಮೊಬೈಲ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಕಳೆದ ರಾತ್ರಿ ಎರಡು ಕಡೆ ದರೋಡೆಗಳು ಆಗಿವೆ.ರಾತ್ರಿ ಸುಮಾರು 9 ಗಂಟೆ ಸಂದರ್ಭದಲ್ಲಿ ಆದರ್ಶ್ ಎಂಬುವವರು ಕಾಮತ್ ಹೋಟೆಲ್ ಮುಂಭಾಗ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದರೋಡೆಕೋರರು ಅವರ ಮೊಬೈಲ್ ಕಸಿದುಕೊಂಡುಪರಾರಿಯಾಗಿದ್ದಾರೆ. ಈ ಬಗ್ಗೆ ಅವರು ವಿವಿ ಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಸೀತಾರಾಮ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ರಾತ್ರಿ ಸುಮಾರು 12.30ರ ಸಮಯದಲ್ಲಿ ನಡೆದು ಮನೆಗೆ ಹೋಗುತ್ತಿದ್ದ ವೇಳೆ ಅವರನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡ ಬಂದ ದರೋಡೆಕೋರರು ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ.
ಮೊಬೈಲ್ ಕಳೆದುಕೊಂಡ ವ್ಯಕ್ತಿ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆ ರಸ್ತೆಗಳಲ್ಲಿನ ಸಿಸಿ ಟಿವಿ ಫೂಟೇಜ್ಗಳನ್ನು ಪರಿಶೀಲಿಸಿ, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.
- ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು
- ರೈಲುಗಳ ಶೌಚಾಲಯಗಳಲ್ಲಿ ನೀರಿನ ಕೊರತೆ ಕುರಿತು 1 ಲಕ್ಷಕ್ಕೂ ಹೆಚ್ಚು ದೂರು : ಸಿಎಜಿ ವರದಿ
- ತ್ರಿವಳಿ ಕೊಲೆಗೆ ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ದೆಹಲಿ
- 33 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ 2 ಕೋಟಿ ಕಾಣಿಕೆ ಸಂಗ್ರಹ
- ಭಾರತಕ್ಕೆ ಪಲಾಯನ ಮಾಡಿದ್ದ ಎಫ್ಬಿಐನ ಟಾಪ್-10 ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಮಹಿಳೆ ಬಂಧನ