ಬೆಂಗಳೂರು, ಜು.6– ನಗರದಲ್ಲಿ ಆಗಾಗ್ಗೆ ಮೊಬೈಲ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಕಳೆದ ರಾತ್ರಿ ಎರಡು ಕಡೆ ದರೋಡೆಗಳು ಆಗಿವೆ.ರಾತ್ರಿ ಸುಮಾರು 9 ಗಂಟೆ ಸಂದರ್ಭದಲ್ಲಿ ಆದರ್ಶ್ ಎಂಬುವವರು ಕಾಮತ್ ಹೋಟೆಲ್ ಮುಂಭಾಗ ನಡೆದು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ದರೋಡೆಕೋರರು ಅವರ ಮೊಬೈಲ್ ಕಸಿದುಕೊಂಡುಪರಾರಿಯಾಗಿದ್ದಾರೆ. ಈ ಬಗ್ಗೆ ಅವರು ವಿವಿ ಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.
ಸೀತಾರಾಮ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ರಾತ್ರಿ ಸುಮಾರು 12.30ರ ಸಮಯದಲ್ಲಿ ನಡೆದು ಮನೆಗೆ ಹೋಗುತ್ತಿದ್ದ ವೇಳೆ ಅವರನ್ನು ಬೈಕ್ನಲ್ಲಿ ಹಿಂಬಾಲಿಸಿಕೊಂಡ ಬಂದ ದರೋಡೆಕೋರರು ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ.
ಮೊಬೈಲ್ ಕಳೆದುಕೊಂಡ ವ್ಯಕ್ತಿ ಮಹದೇವಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎರಡೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆ ರಸ್ತೆಗಳಲ್ಲಿನ ಸಿಸಿ ಟಿವಿ ಫೂಟೇಜ್ಗಳನ್ನು ಪರಿಶೀಲಿಸಿ, ಪರಾರಿಯಾಗಿರುವ ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.
- ಶಿವಮೊಗ್ಗದಲ್ಲಿ ಗಣೇಶ ಮೂರ್ತಿಗೆ ಕಾಲಿನಿಂದ ಒದ್ದು, ನಾಗನ ವಿಗ್ರಹ ಚರಂಡಿಗೆಸೆದು ವಿಕೃತಿ ಮೆರೆದ ಕಿಡಿಗೇಡಿಗಳು : ಭಾರಿ ಆಕ್ರೋಶ
- ನಿವೃತ್ತ CJI ಚಂದ್ರಚೂಡ್ ವಾಸವಿರುವ ನಿವಾಸವನ್ನು ತಕ್ಷಣವೇ ನಿವಾಸ ಖಾಲಿ ಮಾಡಿಸುವಂತೆ ಕೇಂದ್ರಕ್ಕೆ ಸುಪ್ರೀಂ ಪತ್ರ
- ಇಸ್ರೇಲ್-ಇರಾನ್ ಯುದ್ಧದ ನಂತರ ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿ ಖಮೇನಿ
- ದಲೈಲಾಮಾ ಅವರ 90ನೇ ಹುಟ್ಟುಹಬ್ಬ : ಶುಭಾಶಯ ಕೋರಿದ ಪ್ರಧಾನಿ ಮೋದಿ
- ತುಮಕೂರು : ಖಾಸಗಿ ಹೋಟೆಲ್ನಲ್ಲಿ ದಾವಣಗೆರೆಯ ಪಿಎಸ್ಐ ಆತ್ಮಹತ್ಯೆ