ತುಮಕೂರು,ಜು.6- ನಗರದ ಖಾಸಗಿ ಹೋಟೆಲ್ವೊಂದರಲ್ಲಿ ದಾವಣಗೆರೆಯ ಪಿಎಸ್ಐ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜಪ್ಪ(58) ಆತಹತ್ಯೆಮಾಡಿಕೊಂಡ ಪಿಎಸ್ಐ ಎಂದು ಗುರುತಿಸಲಾಗಿದೆ.
ಜು.1ರಂದು ರಾತ್ರಿ ನಗರಕ್ಕೆ ಬಂದು ಎಂ.ಜಿ.ರಸ್ತೆಯಲ್ಲಿರುವ ದ್ವಾರಕ ಹೋಟೆಲ್ ಅಂಡ್ ಲಾಡ್್ಜನಲ್ಲಿ ರೂಮ್ ಬಾಡಿಗೆ ಪಡೆದು ಅಲ್ಲಿಯೇ ತಂಗಿದ್ದರು. ಆದರೆ ಇದ್ದಕ್ಕಿದ್ದಂತೆ ನೇಣುಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.
ರೂಮ್ ಸೇರಿದ ವ್ಯಕ್ತಿ ನಾಲ್ಕು ದಿನಗಳಾದರೂ ರೂಮ್ನಿಂದ ಆಚೆ ಬಂದಿರಲಿಲ್ಲ. ದೂರವಾಣಿ ಕರೆ ಮಾಡಿದರ ಸ್ವೀಕರಿಸಿರಲಿಲ್ಲ. ಅನುಮಾನಗೊಂಡು ರೂಮ್ ಸ್ವಚ್ಚಗೊಳಿಸಲು ತೆರಳಿದಾಗ ಕೆಟ್ಟ ವಾಸನೆ ಬಂದಿದೆ. ಕೂಡಲೇ ಲಾಡ್್ಜ ಮಾಲೀಕರಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ರೂಮ್ ತೆರೆದು ನೋಡಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕೂಡಲೇ ನಗರ ಠಾಣೆಗೆ ಮಾಹಿತಿ ನೀಡಿದ್ದು, ಎಎಸ್ಐ ಗೋಪಾಲ್ ಪರಿಶೀಲನೆ ನಡೆಸಿದಾಗ ಡೆತ್ನೋಟ್ ಪತ್ತೆಯಾಗಿದೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಆತಹತ್ಯೆ ಮಾಡಿಕೊಂಡಿರುವುದಾಗಿ ಆತಹತ್ಯೆಗೂ ಮುನ್ನ ನಾಗರಾಜಪ್ಪ ಡೆತ್ನೋಟ್ ಬರೆದಿಟ್ಟಿದ್ದಾರೆ. ನಾಗರಾಜಪ್ಪ ಅವರು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಸಂಬಂಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ
- ಕೇವಲ ಆರ್ಎಸ್ಎಸ್ ಗುರಿಯಾಗಿಸಿ ನಿರ್ಧಾರ ತೆಗೆದುಕೊಂಡಿಲ್ಲ : ಸಿಎಂ ಸಿದ್ದು ಸ್ಪಷ್ಟನೆ
- ಆರ್ಎಸ್ಎಸ್ ವಿರುದ್ಧ ಧ್ವನಿ ಎತ್ತಿರುವ ಸಚಿವ ಪ್ರಿಯಾಂಕ ಖರ್ಗೆಯನ್ನು ಒಬ್ಬಂಟಿ ಮಾಡಲಾಗಿದೆ : ಮಲ್ಲಿಕಾರ್ಜುನ ಖರ್ಗೆ
- 75 ಗಂಟೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿಸಿದ 300ಕ್ಕೂ ಹೆಚ್ಚು ಮಾವೋವಾದಿಗಳು, ನಕ್ಸಲ್ ಮುಕ್ತ ಭಾರತ ; ಪ್ರಧಾನಿ ಮೋದಿ
- ದೀಪಾವಳಿಗೆ ಬೆಂಗಳೂರಿನಿಂದ ಊರಿಗೆ ತೆರಳುತ್ತಿದ್ದವರಿಗೆ ಶಾಕ್, ಖಾಸಗಿ ಬಸ್ ಮಾಲೀಕರಿಂದ ಮನಸೋಯಿಚ್ಛೆ ಸುಲಿಗೆ