ಬೆಂಗಳೂರು,ಜು.7- ಸರ್ಕಾರದ ವಿರುದ್ಧ ಪಡಿತರ ಆಹಾರಧಾನ್ಯಗಳ ಸರಬರಾಜು ದಾರರು ತಿರುಗಿಬಿದ್ದಿದ್ದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇಂದಿನಿಂದ ಅನ್ನಭಾಗ್ಯ ಆಹಾರ ಧಾನ್ಯಗಳ ಸಾಗಾಣಿಕೆ ಬಂದ್ ಮಾಡಲು ಮುಂದಾಗಿದ್ದಾರೆ.
ಕಳೆದ ನಾಲ್ಕು ತಿಂಗಳಿನಿಂದ ಸುಮಾರು 250 ಕೋಟಿ ರೂ.ಗಳಿಗೂ ಹೆಚ್ಚು ಹಣ ಬಾಕಿ ಬರಬೇಕಾದ ಹಿನ್ನಲೆಯಲ್ಲಿ ಅನ್ನಭಾಗ್ಯ ಆಹಾರಧಾನ್ಯ ಸಾಗಾಣಿಕೆ ಮಾಡುತ್ತಿದ್ದ ಲಾರಿಗಳವರು ಸಾಗಾಣಿಕೆ ಬಂದ್ ಮಾಡಿ ಮುಷ್ಕರ ನಡೆಸಲು ತೀರ್ಮಾನಿಸಿರುವುದರಿಂದ ಇಂದಿನಿಂದ ಪಡಿತರ ಆಹಾರಧಾನ್ಯ ಸರಬರಾಜು ಬಂದ್ ಆಗಲಿದೆ.
ಈ ಕುರಿತು ಮಾತನಾಡಿದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರುಗಳ ಸಂಘದ ಅಧ್ಯಕ್ಷ ಮತ್ತು ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಷಣುಗಪ್ಪ ಅವರು, ಕಳೆದ ನಾಲ್ಕು ತಿಂಗಳಿನಿಂದ ಸರ್ಕಾರ ಸಾಗಾಣಿಕೆ ವೆಚ್ಚ ನೀಡದೆ ಬಾಕಿ ಉಳಿಸಿಕೊಂಡಿದೆ. ಸರ್ಕಾರದಿಂದ 250 ಕೋಟಿ ರೂ. ಬಾಕಿ ಬರಬೇಕಿದೆ ಎಂದರು.
ಬಾಕಿ ಹಣ ಕೊಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. 15 ದಿನಗಳ ಗಡುವು ಕೂಡ ನೀಡಲಾಗಿತ್ತು. ಹಣ ನೀಡದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುಮಾರು 3ರಿಂದ 4 ಸಾವಿರ ಓನರ್ ಕಮ್ ಡ್ರೈವರ್ಗಳಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಬಾಕಿ ಹಣ ಪಾವತಿಯಾಗದಿರುವುದರಿಂದ ಸಾಗಾಣಿಕೆ ವೆಚ್ಚ ಮತ್ತು ಡೀಸೆಲ್ ವೆಚ್ಚ ಭರಿಸಲಾಗದೆ ತೊಂದರೆಯಾಗಿದೆ. ಹೀಗಾಗಿ ಅನಿವಾರ್ಯವಾಗಿ ನಾವು ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗಿದೆ ಎಂದು ಹೇಳಿದರು.
ಸರ್ಕಾರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಾಕಿ ಉಳಿಸಿಕೊಂಡಿರುವುದರಿಂದ ತೊಂದರೆಯಾಗುತ್ತಿದೆ ಎಂದು ಈಗಾಗಲೇ ಸರ್ಕಾರದ ಗಮನಕ್ಕೆ ತಂದಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ನಮ ಬೇಡಿಕೆ ಈಡೇರುವವರೆಗೂ ನಾವು ಮುಷ್ಕರ ನಡೆಸುತ್ತೇವೆ ಎಂದು ಅವರು ತಿಳಿಸಿದರು.
- ನವೆಂಬರ್ನಲ್ಲಿ ಕೆಸೆಟ್-25ರ ಪರೀಕ್ಷೆ
- ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕರ್ನಾಟಕದ ಕೈ ನಾಯಕರಿಗೆ ಸುರ್ಜೇವಾಲ ಕಟ್ಟಪ್ಪಣೆ
- ಬಿಹಾರ : ಟ್ಯಾಂಕರ್ಗೆ ಆಟೋ ಡಿಕ್ಕಿಯಾಗಿ 8 ಮಂದಿ ದುರ್ಮರಣ
- ಶಾಲೆ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ವಿದ್ಯಾರ್ಥಿ
- ಧರ್ಮದ ವಿಚಾರದಲ್ಲಿ ರಾಜಕಾರಣ ಬೇಡ, ಸರ್ಕಾರ ನಿಷ್ಪಕ್ಷವಾದ ತನಿಖೆ ನಡೆಸಲಿದೆ ; ಡಿಕೆಶಿ