ಕೋಲಾರ, ಜು. 9- ಉಗ್ರರಿಗೆ ಮೊಬೈಲ್ ಜತೆಗೆ ನೆರವು ನೀಡಿದ ಮೂವರನ್ನು ವಶಕ್ಕೆ ಪಡೆದ ಎನ್ಐಎ ಈಗ ಸಿಮ್ ನೀಡಿದ್ದ ಕೋಲಾರ ಮೂಲದ ಯುವಕನಿಗೆ ನೋಟೀಸ್ ಜಾರಿ ಮಾಡಿದೆ.
ಬೆಂಗಳೂರಿನ ವೈಟ್ಫೀಲ್್ಡನ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ಕೋಲಾರದ ಭಟ್ರಹಳ್ಳಿ ಗ್ರಾಮದ ಸತೀಶ್ಗೆ ಈಗ ಸಂಕಷ್ಟ ಎದುರಾಗಿದೆ.
ಕಳೆದ ರಾತ್ರಿ ಎನ್ಐಎ ಅಧಿಕಾರಿಗಳು ಇಲ್ಲಿಗೆ ಭೇಟಿ ನೀಡಿದ್ದು, ಸತೀಶ್ ಇಲ್ಲದ ಕಾರಣ ಅವರ ಮನೆಯವರಿಗೆ ನೋಟಿಸ್ ನೀಡಲಾಗಿದೆ.ಇಂದು ಬೆಳಗ್ಗೆ 10 ಗಂಟೆಯೊಳಗೆ ಬೆಂಗಳೂರಿನ ಎನ್ಐಎ ಕಚೇರಿಗೆ ಹಾಜರಾಗಬೇಕೆಂದು ತಿಳಿಸಲಾಗಿತ್ತು. ಆದರೆ, ಈವರೆಗೂ ಆತನ ಸುಳಿವಿಲ್ಲ ಎಂದು ಮೂಲಗಳು ತಿಳಿಸಿವೆ.
ಘಟನೆ ಚುರುಕು ಪಡೆಯುತ್ತಿದ್ದಂತೆ ಸರಿಯಾದ ದಾಖಲೆ ಪಡೆಯದೆ ಸಿಮ್ ನೀಡಿದವರಿಗೂ ಸಂಕಷ್ಟ ಎದುರಾಗಿದ್ದು, ಪ್ರಸ್ತುತ ಸತೀಶ್ನ ಹುಡುಕಾಟ ನಡೆಸಲಾಗಿದೆ. ಸತೀಶ್ ಭಟ್ರಹಳ್ಳಿಯ ಅತ್ತೆ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ.
- ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ
- SHOCKING : 4ನೇ ತರಗತಿ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವು
- ವಾಯು ಪಡೆ ವಿಮಾನ ಪತನ, ಇಬ್ಬರು ಪೈಲೆಟ್ ಸಾವು
- ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಆರಂಭ : ಡಿಕೆಶಿ
- ಕರ್ನಾಟಕದ ವಿಷಯದಲ್ಲಿ ಕೇಂದ್ರ ಸರ್ಕಾರದ ದ್ವೇಷ-ತಾರತಮ್ಯ ನೀತಿ ವಿರುದ್ಧ ಸಿಎಂ, ಡಿಸಿಎಂ ಹೋರಾಟ : ಸುರ್ಜೇವಾಲ