ಗುಂಡ್ಲುಪೇಟೆ,ಜು.9-ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮನೋಜ್ ಕುಮಾರ್ (10) ಮೃತ ದುರ್ದೈವಿ.ತಾಲೂಕಿನ ಕುರಬರಗೇರಿಯಲ್ಲಿ ಈ ಘಟನೆ ನಡೆದಿದೆ.
ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮನೋಜ್ ಕುಮಾರ್ ಪಾಠ ಕೇಳುತ್ತಿದ್ದಾಗ ಕುಸಿದುಬಿದ್ದು, ಮೃತಪಟ್ಟಿದ್ದಾನೆ. ಮೃತ ಮನೋಜ್ ಕುಮಾರ್ ಹೃದಯದಲ್ಲಿ ರಂಧ್ರ ಇದ್ದು, ಜಯದೇವ, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆದಿದ್ದ ಎಂದುತಿಳಿದುಬಂದಿದೆ.
ಘಟನೆ ಬಗ್ಗೆ ಪೊಲೀಸರು ಪರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದೆ. ಹೃದಯಾಘಾತದಿಂದ ಚಾಲಕ ಸಾವುಹೃದಯಾಘಾತದಿಂದ ಗೂಡ್ಸ್ ವಾಹನ ಚಾಲಕ ಮೃತಪಟ್ಟಿರುವ ಘಟನೆ ಸವದತ್ತಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದಿದೆ. ಅಶೋಕ್ ಜೀರಿಗವಾಡ (40) ಮೃತ ದುರ್ದೈವಿ.
ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ ನಿವಾಸಿಯಾಗಿರುವ ಮೃತ ಅಶೋಕ್ ಸವದತ್ತಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಗೆ ಗೂಡ್ಸ್ ವಾಹನದಲ್ಲಿ ಹೆಸರುಕಾಳು ತಂದಿದ್ದರು. ಈ ವೇಳೆ ಅಶೋಕ್ ಎದೆನೋವಿನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಸವದತ್ತಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
- ವಿಶ್ವ ದಾಖಲೆ ಸೇರಲು ಸಜ್ಜಾಗಿದೆ ರಾಮಮಂದಿರ ದೀಪೋತ್ಸವ
- ಚಿಕ್ಕಮಗಳೂರು : ದೇವಿರಮ್ಮ ಜಾತ್ರಾ ಮಹೋತ್ಸವ, ಮಳೆಯಲ್ಲೂ ಬೆಟ್ಟವೇರಿದ ಭಕ್ತರು
- ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ, ಶರ್ಮಾ ಅಟ್ಟರ್ ಪ್ಲಾಪ್
- ತಾಯಿಯೊಂದಿಗೆ ಅಕ್ರಮ ಸಂಬಂಧ ಶಂಕೆ, ಸ್ನೇಹಿತನನ್ನು ಭೀಕರವಾಗಿ ಕೊಂದ ಕುಚಿಕುಗಳು
- ಮರಾಠಾ ಮಂದಿರ ಥಿಯೇಟರ್ನಲ್ಲಿ 30 ವರ್ಷಗಳಿಂದ ಪ್ರದರ್ಶನಗೊಳ್ಳುತ್ತಲೆ ಇದೆ ‘ದಿಲ್ವಾಲೆ ದುಲ್ಹನಿಯ ಲೇ ಜಾಯೇಂಗೆ’ ಚಿತ್ರ