ಬೆಂಗಳೂರು,ಜು.23-ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಶಾಸಕ ಭೈರತಿಬಸವರಾಜು ಅವರು ಇಂದು ಭಾರತಿನಗರ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.
ತನಿಖಾಧಿಕಾರಿಯಾಗಿರುವ ಎಸಿಪಿ ಅವರು ಇಂದು ಬೆಳಗ್ಗೆ ಬೈರತಿಬಸವರಾಜು ಅವರನ್ನು ವಿಚಾರಣೆಗೆ ಒಳಪಡಿಸಿ ಈ ಪ್ರಕರಣದ ಬಗ್ಗೆ ಕೆಲವು ಮಾಹಿತಿ ಗಳನ್ನು ಪಡೆದುಕೊಂಡರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶನಿವಾರ ಬೈರತಿಬಸವರಾಜು ಅವರು ಠಾಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಸತತ 3 ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದರು.
ಇಂದು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಿದ್ದರಿಂದ ಎರಡನೇ ಬಾರಿಗೆ ಹಾಜರಾದರು. ಈ ಪ್ರಕರಣದಲ್ಲಿ ಈಗಾಗಲೇ 11 ಮಂದಿಯನ್ನು ಬಂಧಿಸಿರುವ ಪೊಲೀಸರು, ಅವರುಗಳ ಪಾತ್ರದ ಬಗ್ಗೆ ಒಬ್ಬಬ್ಬರಿಂದಲೂ ನಿಖರವಾದ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (25-07-2025)
- ಲೋಕಸಭೆಯಲ್ಲಿ ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಗದ್ದಲ : ಕಲಾಪ ಬಂಗ
- ತಲಾದಾಯದಲ್ಲಿ ಕರ್ನಾಟಕ ಪ್ರಥಮ ಎನ್ನಲು ಸರ್ಕಾರಕ್ಕೆ ನಾಚಿಕೆಯಾಗಬೇಕು : ಸೀತಾರಾಮ್ ಗುಂಡಪ್ಪ
- ಧರ್ಮಸ್ಥಳದ ಸುತ್ತ ಅಸಹಜ ಸಾವುಗಳ ಪ್ರಕರಣ : ಕಾರ್ಯಾಚರಣೆಗಿಳಿದ ಎಸ್ಐಟಿ ತಂಡ
- ಆಂಧ್ರದಲ್ಲಿ ಬಿಜೆಪಿ ಮುಖಂಡ-ಪುತ್ರನ ಕೊಲೆ : ದುಷ್ಕರ್ಮಿಗಳಿಗಾಗಿ ತೀವ್ರಗೊಂಡ ಶೋಧ