ಬೆಂಗಳೂರು ಜು 23: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್ಗೆ ವಿಸ್ತರಿಸಲಾಗಿದೆ.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ಹೊರಡಿಸಿದ್ದಾರೆ.
- ವರದಕ್ಷಿಣೆ ಕಿರುಕುಳ ಆರೋಪ ಸತ್ಯಕ್ಕೆ ದೂರ : ಎಸ್.ನಾರಾಯಣ್ ಸ್ಪಷ್ಟನೆ
- ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಿ : ನಿರ್ಮಲಾನಂದನಾಥ ಸ್ವಾಮೀಜಿ
- ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಚಾಲಕನಿಗೆ ಬೆತ್ತಲೆಗೊಳಿಸಿ ಥಳಿತ
- ಬೆಂಗಳೂರು : ಚಾಕುವಿನಿಂದ ಇರಿದು ಯುವಕನ ಕೊಲೆ
- ಪರಪ್ಪನ ಅಗ್ರಹಾರ ಕಾರಾಗೃಹದ ಖೈದಿಗಳಿಗೆ ಮಾದಕವಸ್ತು ಸರಬರಾಜು ಜೈಲು ವಾರ್ಡನ್ ಬಂಧನ