ಬೆಳಗಾವಿ, ಜು.24: ಗೋವಾದಲ್ಲಿ ಕನ್ನಡಿಗ ಲಾರಿ ಚಾಲಕನ ಮೇಲೆ ದುಷ್ಕರ್ಮಿಗಳ ಗ್ಯಾಂಗ್ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಕಲಕೇರಿ ಗ್ರಾಮದ ನಿವಾಸಿ ಅನಿಲ್ ರಾಠೋಡ್ ಹಲ್ಲೆಗೊಳಗಾದ ವ್ಯಕ್ತಿ.
ಲಾರಿ ಚಾಲಕ ಅನಿಲ್ ರಾಠೋಡ್, ಮಹಾರಾಷ್ಟ್ರದಿಂದ ಗೋವಾಕ್ಕೆ ಕಲ್ಲು ಸಾಗಿಸುತ್ತಿದ್ದರು. ಈ ವೇಳೆ ಗೋವಾದ ಪ್ರೆಡ್ನ ಬಳಿಯ ಕಾರು, ಜೀಪ್ನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಲಾರಿ ಅಡ್ಡಗಟ್ಟಿ ಗೂಂಡಾಗಿರಿ ಮಾಡಿದ್ದಾರೆ.
ಘಟನೆಯನ್ನು ಲಾರಿ ಚಾಲಕ ಅನಿಲ್ ರಾಠೋಡ್ ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಬಳಿಕ ಪೆಡ್ಡೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈವರೆಗೆ ಯಾವುದೇ ರೀತಿ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಗೋವಾದಲ್ಲಿ ಕನ್ನಡಿಗರ ಮೇಲೆ ನಿರಂತರ ಹಲ್ಲೆ, ದೌರ್ಜನ್ಯ ನಡೆಯುತ್ತಿದೆ. ಕನ್ನಡಿಗರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದೆ.ಇದರ ನಡುವೆ ಗೋವಾ ರಾಜ್ಯದ ಮಾಪ್ಲಾಟ್ರಕ್ ಮಾಲೀಕರ ಸಂಘದ ಮುಖಂಡರಾದ ಸಮೀರ್ ಶೆಟ್ಟರ್ ಮತ್ತು ಸುರೇಶ್ ಪಟ್ಟಿಗೇರಿ ಘಟನೆಯನ್ನು ಖಂಡಿಸಿದ್ದಾರೆ.
- ಜಾತಿ, ಅಪರಾಧ, ಭ್ರಷ್ಟಾಚಾರ ಸಮಾಜದ ಪಿಡುಗು : ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್
- ಬದಲಾಗುತ್ತಿದೆ ದೇಶದ ಜನಸಂಖ್ಯಾಶಾಸ್ತ್ರ : ಪ್ರಧಾನಿ ಮೋದಿ ಕಳವಳ
- ಲಂಡನ್ನಲ್ಲಿ ವಲಸಿಗರ ವಿರುದ್ಧ ರೊಚ್ಚಿಗೆದ್ದ ಬೃಹತ್ ಬಲಪಂಥೀಯರು, ಬೃಹತ್ ಪ್ರತಿಭಟನೆ
- ಪಾನಿಪುರಿ ತಿನ್ನಲು ಹೋಗಿ ಪ್ರಾಣ ಕಳೆದುಕೊಂಡ..!
- ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ನೂಪುರ್ಗೆ ಬೆಳ್ಳಿ, ಪೂಜಾಗೆ ಕಂಚಿನ ಪದಕ ಜೈಸಿನ್ಗೆ ಚಿನ್ನ