ಬೆಂಗಳೂರು,ಜು.24-ನಗರದಲ್ಲಿ ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶ ಮೂಲದ ಸುಮನಾ (22) ಮೃತಪಟ್ಟ ಗರ್ಭಿಣಿ.
ಸುಮನಾ ಅವರು ಪತಿ ಶಿವಂನೊಂದಿಗೆ ಹೆಣ್ಣೂರಿನ ಥಳಿಸಂದ್ರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಸುಮನಾ ಅವರು ಗರ್ಭಿಣಿಯಾಗಿದ್ದು, ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದಾರೆ. ಪತ್ನಿಯ ಮೃತದೇಹದ ಜೊತೆಯೇ ಪತಿ ಎರಡು ದಿನ ಕಳೆದಿದ್ದಾನೆ.
ಪತ್ನಿ ಸಾವನ್ನಪ್ಪಿದ ಮೊದಲ ದಿನ ಕೆಲಸಕ್ಕೆ ಹೋಗಿ ಬಂದಿದ್ದಾನೆ. ಎರಡನೇ ದಿನ ರಾತ್ರಿ ಪತ್ನಿಯ ಮೃತದೇಹದ ಮುಂದೆ ಮದ್ಯಸೇವಿಸಿ, ಮೊಟ್ಟೆ ಪಲ್ಯ ಮಾಡಿಕೊಂಡು ಊಟ ಮಾಡಿದ್ದಾನೆ.ನಿನ್ನೆ ಮಧ್ಯಾಹ್ನದ ವೇಳೆಗೆ ಮೃತದೇಹ ಕೊಳೆತು ದುರ್ವಾಸನೆ ಬರಲಾರಂಭಿಸಿದೆ.
ನೆರೆಹೊರೆಯವರು ಅನುಮಾನಗೊಂಡು ಇವರ ಮನೆಗೆ ಬಂದು ನೋಡಿದಾಗ ಸುಮನಾ ಸಾವನ್ನಪ್ಪಿರುವುದು ಕಂಡುಬಂದಿದೆ. ಅಷ್ಟೊತ್ತಿಗಾಗಲೇ ಪತಿ ಶಿವಂ ಪರಾರಿಯಾಗಿದ್ದಾನೆ. ಈ ಬಗ್ಗೆ ಪೊಲೀಸರಿಗೆ ಸ್ಥಳೀಯರು ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲಿಸಿದ್ದಾರೆ.
ಸಾವು ಹೇಗಾಗಿದೆ ಎಂಬುವುದು ನಿಗೂಢವಾಗಿದೆ. ಅವರ ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಮೂಗಿನಲ್ಲಿ ರಕ್ತಸ್ರಾವವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸುಮನಾ ಅವರ ಅನುಮಾನಾಸ್ಪದ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೆಣ್ಣೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿವಂ ಪತ್ತೆಗೆ ಶೋಧ ಕೈಗೊಂಡಿದ್ದಾರೆ.
- ಜಾತಿ, ಅಪರಾಧ, ಭ್ರಷ್ಟಾಚಾರ ಸಮಾಜದ ಪಿಡುಗು : ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್
- ಬದಲಾಗುತ್ತಿದೆ ದೇಶದ ಜನಸಂಖ್ಯಾಶಾಸ್ತ್ರ : ಪ್ರಧಾನಿ ಮೋದಿ ಕಳವಳ
- ಲಂಡನ್ನಲ್ಲಿ ವಲಸಿಗರ ವಿರುದ್ಧ ರೊಚ್ಚಿಗೆದ್ದ ಬೃಹತ್ ಬಲಪಂಥೀಯರು, ಬೃಹತ್ ಪ್ರತಿಭಟನೆ
- ಪಾನಿಪುರಿ ತಿನ್ನಲು ಹೋಗಿ ಪ್ರಾಣ ಕಳೆದುಕೊಂಡ..!
- ವಿಶ್ವ ಬಾಕ್ಸಿಂಗ್ ಚಾಂಪಿಯನ್ಶಿಪ್ ನೂಪುರ್ಗೆ ಬೆಳ್ಳಿ, ಪೂಜಾಗೆ ಕಂಚಿನ ಪದಕ ಜೈಸಿನ್ಗೆ ಚಿನ್ನ