ಬೆಂಗಳೂರು, ಜು.24– ರಾಜಧಾನಿ ಬೆಂಗಳೂರಿನ ಶಿವಾಜಿನಗರದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿರುವ ಕಾರ್ಮಿಕ ಇಲಾಖೆಯ ನಿರೀಕ್ಷಕರು, ಒಟ್ಟು 14 ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಾಜಿನಗರ ವಾರ್ಡಿನಲ್ಲಿ ಬಾಲಕಾರ್ಮಿಕ ಕಿಶೋರ ಕಾರ್ಮಿಕರ ಕಾಯ್ದೆ ಅಡಿ ಕಾರ್ಮಿಕ ಇಲಾಖೆ ಹಿರಿಯ ಇನ್ಸ್ಪೆಕ್ಟರ್ ಸಿ.ಎನ್.ರಾಜೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.
ಈ ವೇಳೆ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ನೀಡುವ ಮುಖಾಂತರ ಬಾಲಕಾರ್ಮಿಕತೆ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಸಾಕು ಪ್ರಾಣಿಗಳ ಮಾರಾಟ ಮಳಿಗೆ, ಹೋಟೆಲ್ ಹಾಗೂ ಬ್ಯಾಗ್ ತಯಾರಿಕೆ ಘಟಕದಲ್ಲಿ ಸೇರಿದಂತೆ ಒಟ್ಟು 14 ಬಾಲ ಹಾಗೂ ಕಿಶೋರ ಕಾರ್ಮಿಕರು ಸಂರಕ್ಷಿಸಲಾಯಿತು. ಎಲ್ಲ ಮಕ್ಕಳನ್ನು ಬೆಂಗಳೂರು ಬಾಲಕರ ಬಾಲಮಂದಿರಕ್ಕೆ ಹಾಜರಿ ಪಡಿಸಲು ಹಾಗೂ ವೈದ್ಯಕೀಯ ತಪಾಸಣೆ ನಡೆಸಲಾಯಿತು.
ಈ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಬಾಸ್ಕೊ ಸಿಬ್ಬಂದಿಗಳು ಸೇರಿದಂತೆ ಪ್ರಮುಖರಿದ್ದರು.
- ಸುರಂಗ ಮಾರ್ಗಕ್ಕೆ ಗಡ್ಕರಿ ಅನುಮತಿ ನೀಡಿದ್ದಾರೆಂಬುದು ಕೇವಲ ವದಂತಿ : ತೇಜಸ್ವಿ ಸೂರ್ಯ
- ಲಾಲ್ಬಾಗ್ನಲ್ಲಿ ಗುಂಡಿ ತೋಡುವ ಕೆಲಸ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ : ಆರ್.ಅಶೋಕ್
- ಸುರಂಗ ರಸ್ತೆ ವಿರೋಧಿಸಿ ಬಿಜೆಪಿ ಪ್ರತಿಭಟನೆಗೆ ಡಿಕೆಶಿ ತಿರುಗೇಟು
- ರಾಜ್ಯದಲ್ಲಿ ನವೆಂಬರ್ ರಾಜಕೀಯ ಕ್ರಾಂತಿ, ಸಚಿವ ಸತೀಶ್ ಜಾರಕಿಹೊಳಿ ದೆಹಲಿಗೆ ದೌಡು
- 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಸಸೂತ್ರವಾಗಿ ನಡೆದ ಕೆ-ಸೆಟ್ ಪರೀಕ್ಷೆ
