ಬೆಂಗಳೂರು, ಜು.31-ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆಯನ್ನು ವಹಿಸಿಕೊಳ್ಳಲು ಆರು ಮಂದಿ ಹಿರಿಯ ಶಾಸಕರನ್ನು ನಾಮ ನಿರ್ದೇಶನ ಮಾಡಲಾಗಿದೆ.ಅಪ್ಪಾಜಿ ನಾಡಗೌಡ, ತನ್ನೀರ್ ಸೇಠ್, ಬಿ. ಆರ್. ಪಾಟೀಲ್, ಅಬ್ಬಯ್ಯ ಪ್ರಸಾದ್, ಆರಗ ಜ್ಞಾನೇಂದ್ರ, ಎಂ. ಟಿ. ಕೃಷ್ಣಪ್ಪ ಅವರು ಸಭಾಧ್ಯಕ್ಷರ ಅನುಪಸ್ಥಿತಿಯಲ್ಲಿ ವಿಧಾನಸಭೆಯ ಅಧ್ಯಕ್ಷತೆ ವಹಿಸಲಿರುವ ಸದಸ್ಯರೆಂದು ಸಭಾಧ್ಯಕ್ಷ ಯು.ಟಿ.ಖಾದರ್ ನಾಮ ನಿರ್ದೇಶನ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳ ನಿಯಮ 9ರ ಮೇರೆಗೆ ಸಭಾಧ್ಯಕ್ಷರು 6 ಮಂದಿ ವಿಧಾನಸಭಾ ಸದಸ್ಯರನ್ನು ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- 14 ಜಿಲ್ಲೆಗಳ 42 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಮಾಡಿದ ನಿಖಿಲ್ ಕುಮಾರಸ್ವಾಮಿ
- ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳ ಬಂಧನ
- ಚುನಾವಣಾ ಆಯೋಗವನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿರುವುದೇಕೆ..? : ಡಿ.ಕೆ. ಸುರೇಶ್
- ಅರ್ಜುನ ಆನೆ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪನೆ : ಸಚಿವ ಖಂಡ್ರೆ
- ಗುಂಡಿ ಬಿದ್ದ ರಸ್ತೆಗಳಿಗೆ ಪ್ರಶಸ್ತಿ ನೀಡಿ ಬಿಬಿಎಂಪಿ ಕಾಲೆಳೆದ ಪ್ರಜ್ಞಾವಂತ ನಾಗರೀಕರು