ನವದೆಹಲಿ, ಆ.1- ಬಿಜೆಪಿಗೆ ಮತ ಕಳ್ಳತನದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಆರೋಪಗಳು ಆಧಾರರಹಿತ ಮತ್ತು ಬೇಜವಾಬ್ದಾರಿ ಹೇಳಿಕೆಗಳನ್ನು ನಿರ್ಲಕ್ಷಿಸುವಂತೆ ತನ್ನ ಅಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.
ಚುನಾವಣಾ ಆಯೋಗದ ವಿರುದ್ದ ಮುಚ್ಚಿದ ಪುರಾವೆಗಳಿವೆ ಎಂದು ರಾಹುಲ್ ಗಾಂಧಿ ಸರಣಿ ಹೇಳಿಕೆ ಮುಂದುವರೆಸುತ್ತಿರುವ ಹಿನ್ನಲೆಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಆಯೋಗ ಮರೆಮಾಡಲು ಯಾವುದೇ ಸ್ಥಳವಿಲ್ಲ ಎಂದು ಹೇಳಿದೆ.
ಚುನಾವಣಾ ಆಯೋಗದ ವಿರುದ್ದ ಪ್ರತಿದಿನವೂ ಮಾಡಲಾಗುತ್ತಿರುವ ಇಂತಹ ಆಧಾರರಹಿತ ಆರೋಪಗಳನ್ನು ನಿರ್ಲಕ್ಷಿಸುತ್ತದೆ ಮತ್ತು ದೈನಂದಿನ ಬೆದರಿಕೆಗಳನ್ನು ನೀಡಲಾಗುತ್ತಿದ್ದರೂ, ಎಲ್ಲಾ ಚುನಾವಣಾ ಅಧಿಕಾರಿಗಳು ಅಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ನಿರ್ಲಕ್ಷಿಸಿ ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ಕೆಲಸ ಮಾಡುವಂತೆ ಹೇಳಿದೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಗಾಂಧಿ, ತಮ ಪಕ್ಷವು ಆಪಾದಿತ ಚುನಾವಣಾ ಅಕ್ರಮಗಳ ಕುರಿತು ಹೊಂದಿರುವ ಪುರಾವೆಗಳನ್ನು ಆಣು ಬಾಂಬ್ ಗೆ ಹೋಲಿಸಿದ್ದಾರೆ ಮತ್ತು ಅದು ಸ್ಫೋಟಗೊಂಡಾಗ ಚುನಾವಣಾ ಆಯೋಗಕ್ಕೆ ದೇಶದಲ್ಲಿ ಅಡಗಿಕೊಳ್ಳಲು ಯಾವುದೇ ಸ್ಥಳವಿರುವುದಿಲ್ಲ ಎಂದು ಹೇಳಿದರು.
- ಮಹೇಶ್ ತಿಮರೋಡಿ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆ ಪ್ರಕರಣ : ಎಫ್ಐಆರ್ ದಾಖಲು
- ಮೈಸೂರು ದಸರಾ : ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಡಿಜಿ ಸೂಚನೆ
- ಬಿಗ್ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ನೀಡಿದ ಭಾವ
- ಕೇರಳದಲ್ಲಿ ಮೆದುಳು ತಿನ್ನುವ ಸೋಂಕು, ಕರ್ನಾಟಕದಲ್ಲೂ ಆತಂಕ
- ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ, ಕಳಂಕ ತರಬೇಡಿ : ಡಿಕೆಶಿ ವಿರುದ್ಧ ಅಶೋಕ್ ಕಿಡಿ