ಬೆಂಗಳೂರು,ಆ.9- ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಶವಗಳನ್ನು ಹೂಳಲಾಗಿದೆ ಎಂಬ ದೂರಿನನ್ವಯ ಎಸ್ಐಟಿ ಇಂದು ಮತ್ತೊಂದು ಹೊಸ ಸ್ಥಳದಲ್ಲಿ ಉತ್ಖನನ ಆರಂಭಿಸಿದೆ. ದೂರುದಾರನನ್ನು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಎಸ್ಐಟಿ ತಂಡ ಇಂದು ಹೊಸ ಸ್ಥಳಕ್ಕೆ ಕರೆದೊಯ್ದು ಪರಿಶೀಲನೆ ನಡೆಸುತ್ತಿದೆ.
ಹಲವಾರು ಮೃತದೇಹಗಳನ್ನು ಹೂಳಲಾಗಿದೆ ಎಂಬ ದೂರುದಾರನ ಹೇಳಿಕೆಯಂತೆ ಎಸ್ಐಟಿ ಹಾಗೂ ಇನ್ನಿತರ ಅಧಿಕಾರಿಗಳ ತಂಡ ನಿನ್ನೆ ಹೊಸ ಸ್ಥಳದಲ್ಲಿ ಪರಿಶೀಲನೆ ನಡೆಸಿದ ವೇಳೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಳಿಯ ಗೋಂಕ್ರತಾರ್ ಸಮೀಪದ ಅರಣ್ಯ ಪ್ರದೇಶಕ್ಕೆ ನಿನ್ನೆ ಸಾಕ್ಷಿ ದೂರುದಾರನೊಂದಿಗೆ ಶೋಧಕಾರ್ಯ ನಡೆಸಿದರಾದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಸಂಜೆ ವೇಳೆಗೆ ಉತ್ಖನನ ಕಾರ್ಯ ನಿಲ್ಲಿಸಲಾಯಿತು.
ಕಲ್ಲೇರಿಯಾ 500 ಮೀಟರ್ ದೂರದಲ್ಲಿ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯನ್ನು ಹೂಳಲಾಗಿದೆ ಎಂದು ದೂರುದಾದ ಹೇಳಿದ ಜಾಗದಲ್ಲಿಯೇ ಶೋಧ ನಡೆಸಲಾಯಿತು. 13ನೇ ಜಾಗ ಹೊರತುಪಡಿಸಿ ಹೊಸ ಜಾಗದಲ್ಲಿ ಉತ್ಖನನ ಆರಂಭವಾಗಿದೆ.
- ಹಳದಿ ಮೆಟ್ರೋಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ, ಇಲ್ಲಿದೆ ಹೈಲೈಟ್ಸ್
- ಕಣ್ಮನ ಸೆಳೆಯುತ್ತಿದೆ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ, ಹೂವಿನ ಸೊಬಗು ಕಣ್ತುಂಬಿಕೊಂಡ ಜನರು
- ಧರ್ಮಸ್ಥಳದಲ್ಲಿ ಗಲಾಟೆ : ಆರು ಮಂದಿ ಅರೆಸ್ಟ್, ನಾಳೆಯಿಂದ ಮತ್ತೆ ಉತ್ಖನನ
- ಚುನಾವಣಾ ಆಯೋಗದ ವಿರುದ್ಧ ಅಬ್ಬರಿಸಿ ಸಾಕ್ಷಿ ನೀಡದೆ ಮೌನಕ್ಕೆ ಶರಣಾದ ಕಾಂಗ್ರೆಸ್ ನಾಯಕರು
- ಆಪರೇಷನ್ ಸಿಂಧೂರ್ ಮತ್ತು ಸೇನೆಯ ಪರಾಕ್ರಮವನ್ನು ಪ್ರಶ್ನಿಸಿ ಘನತೆ ಕೆಡಿಸಿಕೊಂಡ ರಾಹುಲ್ ಗಾಂಧಿ : ಕಿರಣ್ ರಿಜಿಜು