ಬೆಂಗಳೂರು,ಆ.9– ಕಾಲೇಜು ಸಹಪಾಠಿಗಳ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗುಳೇದಗುಡ್ಡ ಪಟ್ಟಣದ ನಿವಾಸಿ ಅಂಜಲಿ ಮುಂಡಾಸ್ (21) ಆತಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಅಂಜಲಿ ಅವರಿಗೆ ಸಹಪಾಠಿ ಯುವಕ ಹಾಗೂ ಯುವತಿ ಸೇರಿದಂತೆ ಮೂವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.
ನಿನ್ನೆ ಎಂದಿನಂತೆ ಕಾಲೇಜಿಗೆ ಅಂಜಲಿ ಹೋಗಿದ್ದಾಗ ಸಹಪಾಠಿಗಳು ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದಿದ್ದ ಅಂಜಲಿ ಮನೆಗೆ ಬಂದು ಡೆತ್ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ನೋಟ್ನಲ್ಲಿ ಕಿರುಕುಳ ನೀಡಿದವರ ಹೆಸರುಗಳು ಹಾಗೂ ಅವರುಗಳ ಮೊಬೈಲ್ ನಂಬರ್ಗಳನ್ನು ಬರೆದು ಇವರುಗಳನ್ನು ಸುಮನೆ ಬಿಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.ಸುದ್ದಿ ತಿಳಿದು ಗುಳೇದಗುಡ್ಡ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಸ್ಥಳದಲ್ಲಿ ದೊರೆತ ಡೆತ್ನೋಟ್ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
- ಹಳದಿ ಮೆಟ್ರೋಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ, ಇಲ್ಲಿದೆ ಹೈಲೈಟ್ಸ್
- ಕಣ್ಮನ ಸೆಳೆಯುತ್ತಿದೆ ಲಾಲ್ಬಾಗ್ ಫಲಪುಷ್ಪ ಪ್ರದರ್ಶನ, ಹೂವಿನ ಸೊಬಗು ಕಣ್ತುಂಬಿಕೊಂಡ ಜನರು
- ಧರ್ಮಸ್ಥಳದಲ್ಲಿ ಗಲಾಟೆ : ಆರು ಮಂದಿ ಅರೆಸ್ಟ್, ನಾಳೆಯಿಂದ ಮತ್ತೆ ಉತ್ಖನನ
- ಚುನಾವಣಾ ಆಯೋಗದ ವಿರುದ್ಧ ಅಬ್ಬರಿಸಿ ಸಾಕ್ಷಿ ನೀಡದೆ ಮೌನಕ್ಕೆ ಶರಣಾದ ಕಾಂಗ್ರೆಸ್ ನಾಯಕರು
- ಆಪರೇಷನ್ ಸಿಂಧೂರ್ ಮತ್ತು ಸೇನೆಯ ಪರಾಕ್ರಮವನ್ನು ಪ್ರಶ್ನಿಸಿ ಘನತೆ ಕೆಡಿಸಿಕೊಂಡ ರಾಹುಲ್ ಗಾಂಧಿ : ಕಿರಣ್ ರಿಜಿಜು