ನವದೆಹಲಿ, ಆ.10- ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಭಾರತೀಯ ವಾಯುಪಡೆ ಮತ್ತು ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಮಾಡಿದ ಹೇಳಿಕೆಗಳ ಮೂಲಕ ಅವರು ತಮ್ಮ ಸ್ಥಾನಮಾನವನ್ನು ಕಡಿಮೆ ಮಾಡಿಕೊಂಡಿದ್ದಾರೆ ಮತ್ತು ಭಾರತದ ಉನ್ನತ ಖ್ಯಾತಿಗೆ ಹಾನಿ ಮಾಡಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದ್ದಾರೆ.
ಕಿರಣ್ ರಿಜಿಜು ಅವರು ಎಕ್್ಸನಲ್ಲಿ ರಾಹುಲ್ ಗಾಂಧಿ ಅವರನ್ನು ಭಾರತೀಯ ಸಂಸತ್ತಿನ ಗೌರವವನ್ನು ಕಾಪಾಡಿಕೊಳ್ಳುವಂತೆ ವಿನಂತಿಸಿದ್ದಾರೆ. ರಾಹುಲ್ ಗಾಂಧಿ ಅವರು ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ ಸರ್ಕಾರಕ್ಕೆ ತಿಳಿಸಿದ್ದರಿಂದ ಭಾರತೀಯ ವಾಯುಪಡೆಯ ಕೈಗಳನ್ನು ಸರ್ಕಾರವು ಕಟ್ಟಿಹಾಕಿದೆ ಎಂದು ಸಂಸತ್ತಿನಲ್ಲಿ ಹೇಳಿದ್ದರು.
ಈ ಹೇಳಿಕೆಯನ್ನು ನಿರಾಕರಿಸುತ್ತಾ, ಭಾರತೀಯ ವಾಯುಪಡೆ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್ ಅವರು, ಆಪರೇಷನ್ ಸಿಂಧೂರ್ ಸಮಯದಲ್ಲಿ ಸರ್ಕಾರವು ಅವರ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ಕಾರ್ಯಾಚರಣೆಯ ಸಮಯದಲ್ಲಿ ದಾಳಿಗಳನ್ನು ಯೋಜಿಸಲು ಮತ್ತು ಕಾರ್ಯಗತಗೊಳಿಸಲು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದ್ದರು.
ಈ ಕಾರ್ಯಾಚರಣೆಯ ಕುರಿತು ಚರ್ಚೆಯ ಸಮಯದಲ್ಲಿ ಸಂಸತ್ತಿನಲ್ಲಿ ರಾಹುಲ್ ಗಾಂಧಿಯವರ ಹೇಳಿಕೆಗಳು ಮತ್ತು ಮುಖ್ಯಸ್ಥರ ನಿರಾಕರಣೆಯ ವೀಡಿಯೊವನ್ನು ಹಂಚಿಕೊಂಡ ಕಿರಣ್ ರಿಜಿಜು ಅವರು, ಭಾರತದ ಸಂಸತ್ತಿನ ಘನತೆಯನ್ನು ಕಾಪಾಡಿಕೊಳ್ಳಲು ನಾನು ರಾಹುಲ್ ಗಾಂಧಿಯವರನ್ನು ವಿನಂತಿಸುತ್ತೇನೆ. ನೀವು ಯಾವಾಗಲೂ ಸುಳ್ಳು ಹೇಳುತ್ತಲೇ ಇರುತ್ತೀರಿ? ಸಂಸದೀಯ ಗುಣಮಟ್ಟವನ್ನು ಕಾಯ್ದುಕೊಂಡಿದ್ದ ಅನೇಕ ವಿರೋಧ ಪಕ್ಷದ ನಾಯಕರನ್ನು ನಾನು ನೋಡಿದ್ದೇನೆ. ನೀವು ನಿಮ್ಮ ಸ್ಥಾನಮಾನವನ್ನು ಕಡಿಮೆ ಮಾಡಿದ್ದೀರಿ ಮಾತ್ರವಲ್ಲದೆ ಭಾರತದ ಉನ್ನತ ಖ್ಯಾತಿಯನ್ನು ಹಾನಿಗೊಳಿಸಿದ್ದೀರಿ! ಎಂದಿದ್ದಾರೆ.
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿದ್ದುಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆಯ ಸಂದರ್ಭದಲ್ಲಿ, ಪಾಕಿಸ್ತಾನದ ವಾಯು ರಕ್ಷಣಾ ವ್ಯವಸ್ಥೆಗಳ ಮೇಲೆ ದಾಳಿ ಮಾಡದಂತೆ ವಾಯುಪಡೆಗೆ ತಿಳಿಸಲಾಗಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದರು.