ಬೆಂಗಳೂರು,ಆ.13- ದೇಶಭಕ್ತಿ ಮತ್ತು ಸುಸ್ಥಿರತೆಯನ್ನು ಸಂಯೋಜಿಸುವ ಉಪಕ್ರಮದಲ್ಲಿ ದ ಗ್ರೀನ್ ಸ್ಕೂಲ್ ಬೆಂಗಳೂರಿನ ವತಿಯಿಂದ ಗಣರಾಜ್ಯೋತ್ಸವದಂದು ಸಂಪೂರ್ಣವಾಗಿ ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ ರಾಷ್ಟ್ರಧ್ವಜ ತಯಾರಿಸಲಾಗಿದೆ.
ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿದ ವಿಶಿಷ್ಟವಾದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ಸಿದ್ಧತೆ ನಡೆದಿದೆ. ಮರುಬಳಕೆಯ ಪ್ಲಾಸ್ಟಿಕ್ ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಿ ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡಲು ಇದನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿದ ಪ್ರಾಂಶುಪಾಲೆ ಉಷಾ ಅಯ್ಯರ್, ಪ್ಲಾಸ್ಟಿಕ್ ತ್ಯಾಜ್ಯವನ್ನು ಜವಳಿಯಾಗಿ ಪರಿವರ್ತಿಸುವಲ್ಲಿ ಪರಿಣತಿ ಹೊಂದಿರುವ ಕಾನ್ಸುರ ಮೂಲದ ಮರುಬಳಕೆ ಕಂಪನಿಯೊಂದಿಗೆ ಜೊತೆಗೂಡಿ 35,000 ಬಾಟಲಿಗಳಿಂದ ರಾಷ್ಟ್ರಧ್ವಜವನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಉಪಕ್ರಮವು ಪರಿಸರ ಪ್ರಜ್ಞೆಯನ್ನು ಬೆಳೆಸುವುದು ಮತ್ತು ತ್ಯಾಜ್ಯವನ್ನು ಅರ್ಥಪೂರ್ಣವಾಗಿ ಮರುಬಳಕೆ ಮಾಡುವುದು ಹೇಗೆ ಎಂಬುದನ್ನು ಪ್ರದರ್ಶಿಸುತ್ತದೆ ಎಂದು ಹೇಳಿದರು.
- ಡಿಸೆಂಬರ್ ತಿಂಗಳ ಒಳಗೆ 2ಲಕ್ಷ ಪೋಡಿ ವಿತರಣೆ : ಸಚಿವ ಕೃಷ್ಣಭೈರೇಗೌಡ
- ಬೀದಿನಾಯಿಗಳಿಗೆ ಬಾಡೂಟ ಹಾಕುವ ಯೋಜನೆ ಸ್ಥಗಿತ ಸಾಧ್ಯತೆ
- ಸ್ವಾತಂತ್ರ್ಯೋತ್ಸವಕ್ಕೆ ಬಿಗಿ ಬಂದೋಬಸ್ತ್, ಮಾಣಿಕ್ ಷಾ ಪರೇಡ್ ಮೈದಾನ ಪ್ರವೇಶಕ್ಕೆ ಇದೇ ಮೊದಲ ಬಾರಿಗೆ ಇ-ಪಾಸ್ ವ್ಯವಸ್ಥೆ
- ಮುಜರಾಯಿ ದೇಗುಲಗಳಲ್ಲಿ ಆ.15 ರಿಂದ ಪ್ಲಾಸ್ಟಿಕ್ ಬಳಕೆ ನಿಷೇಧ
- ರಾಜ್ಯದಲ್ಲಿ ಪ್ರತಿವರ್ಷ ರಸ್ತೆ ಅಪಘಾತದಿಂದ ಸಾವಿರಕ್ಕೂ ಹೆಚ್ಚು ಅಧಿಕ ಮಂದಿ ಸಾವು : ಸಚಿವ ರಾಮಲಿಂಗಾರೆಡ್ಡಿ