ನವದೆಹಲಿ: ಮಂಡ್ಯ ಲೋಕಸಭೆ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಗಡ್ಕರಿ ಅವರ ನಿವಾಸಕ್ಕೆ ತಮ್ಮ ಆಪ್ತ ಅಧಿಕಾರಿಗಳ ಜತೆ ತೆರಳಿ ಭೇಟಿ ಮಾಡಿದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ ಕಾರ್ಯಗತ ಆಗುತ್ತಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಈಗಾಗಲೇ ಹಲವಾರು ಯೋಜನೆಗಳ ಬಗ್ಗೆ ಮನವಿ ಮಾಡಿದ್ದು, ಬಹುತೇಕ ಯೋಜನೆಗಳಿಗೆ ಹೆದ್ದಾರಿ ಸಚಿವರಿಂದ ಅನುಮೋದನೆ ದೊರೆತಿದೆ. ಉಳಿದ ಕೆಲವು ಯೋಜನೆಗಳ ಬಗ್ಗೆ ಸಚಿವರು ಹೆದ್ದಾರಿ ಸಚಿವರೊಂದಿಗೆ ಚರ್ಚಿಸಿದರು.
ಇದೇ ವೇಳೆ ಪಾಂಡವಪುರ ಸಕ್ಕರೆ ಕಾರ್ಖಾನೆ ಸಮೀಪದ ಸಿಡಿಎಸ್ ಕಾಲುವೆಯಿಂದ ದರ್ಶಗುಪ್ಪೆ ನೀರು ಸಂಸ್ಕರಣ ಘಟಕದವರೆಗೂ ನಾಲ್ಕು ಪಥದ ಹೆದ್ದಾರಿಯ ಅಭಿವೃದ್ಧಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದರು.
- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಂಸದ ಡಾ.ಸಿ.ಎನ್.ಮಂಜುನಾಥ್
- ಬೆಂಗಳೂರಿನ ಮಿಲ್ಕ್ ಕಾಲೋನಿಯಲ್ಲಿ ಡೈಮಂಡ್ ಗಣಪತಿ
- ಕೊಳವೆ ಬಾವಿ ನೀರಿಗೆ ಟೆಲಿಮೆಟ್ರಿ ಅಳವಡಿಕೆ, ಟ್ಯಾಂಕರ್ಗಳಿಗೆ ಶುಲ್ಕ ವಿಧಿಸುವ ಕರ್ನಾಟಕ ಅಂತರ್ಜಲ ಕಾಯ್ದೆಗೆ ಅನುಮೋದನೆ
- ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ
- ದೆಹಲಿ ಸಿಎಂ ರೇಖಾ ಗುಪ್ತಾಗೆ ಝಡ್+ ಭದ್ರತೆ