ಬೆಂಗಳೂರು,ಆ.22- ರಾಜ್ಯದ ಇತಿಹಾಸ ಪ್ರಸಿದ್ಧ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದ್ದು, 2026 ರ ಡಿಸೆಂಬರ್ನಲ್ಲಿ ಪೂರ್ಣಗೊಳ್ಳಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ವಿಧಾನಪರಿಷತ್ನಲ್ಲಿ ತಿಳಿಸಿದರು.
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ಅಧಿನಿಯಮ ವಿಧೇಯಕದ ಮೇಲೆ ಮಾತನಾಡಿದ ಅವರು, ಸವದತ್ತಿ ಯಲ್ಲಮ ರಾಜ್ಯದಲ್ಲಿ ಅತ್ಯಂತ ಪ್ರಮುಖ ಪ್ರವಾಸೋದ್ಯಮ ತಾಣವಾಗಿದೆ. ದೇಶ-ವಿದೇಶಗಳಿಂದಲೂ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಬರುವ ಭಕ್ತಾದಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲು 230 ಕೋಟಿ ರೂ. ಯೋಜನೆಯನ್ನು ರೂಪಿಸಿದ್ದೇವೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಶೀಘ್ರದಲ್ಲೇ ಟೆಂಡರ್ ಕರೆಯುವುದಾಗಿ ತಿಳಿಸಿದರು.
ಸವದತ್ತಿ ಯಲ್ಲಮ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮುಂದಿನ ಡಿಸೆಂಬರ್ 2026ರೊಳಗೆ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭಕ್ತರಿಗೆ ಅನುಕೂಲವಾಗಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.ಇದೇ ರೀತಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಪ್ರವಾಸೋದ್ಯಮ ತಾಣವನ್ನು ಅಭಿವೃದ್ಧಿಪಡಿಸಲಾಗುವುದು. ಒಟ್ಟು 11 ಕಡೆ ರೋಪ್ ವೇ (ಕೇಬಲ್ ಕಾರ್) ಅಳವಡಿಕೆ ಮಾಡಲಾಗಿದೆ. ಇದಕ್ಕಾಗಿ ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ ಎಂದರು.ಶಕ್ತಿ ಯೋಜನೆ ಬಂದ ಮೇಲೆ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ಕೊಡುವವರ ಸಂಖ್ಯೆ ದ್ವಿಗುಣವಾಗಿದೆ. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ನಾವು ಕೇವಲ ಲಾಭ ನಷ್ಟವನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ ತಾಣ ಅಭಿವೃದ್ಧಿಪಡಿಸುತ್ತಿಲ್ಲ. ಬದಲಿಗೆ ಮೊದಲು ನಮ ಕನ್ನಡಿಗರು ಮತ್ತು ಮಕ್ಕಳು ಇಲ್ಲಿನ ಸ್ಥಳಗಳನ್ನು ನೋಡಬೇಕು. ಅನೇಕ ಜನರು ನಮಲ್ಲಿರುವ ಸ್ಥಳಗಳನ್ನು ನೋಡಿಲ್ಲ. ಮೊದಲು ಇಲ್ಲಿನ ಜನರು ನೋಡಿದರೆ ಅಭಿವೃದ್ಧಿ ತನ್ನಿಂದ ತಾನೇ ಆಗುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಗದಗದಲ್ಲಿರುವ ಕಪ್ಪತಗುಡ್ಡಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ಪರಿಣಾಮ ಕೇವಲ ಭಾನುವಾರ ಒಂದು ದಿನ 4 ಲಕ್ಷ ಪಾರ್ಕಿಂಗ್ ಶುಲ್ಕ ಬರುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿ ಎಂದರೆ ಸಮುದ್ರಗಳು, ರೆಸ್ಟೋರೆಂಟ್ಗಳು ಅಭಿವೃದ್ಧಿಪಡಿಸುವುದಲ್ಲ.
ವಿದೇಶದಲ್ಲಿರುವ ಪ್ರವಾಸೋದ್ಯಮ ನೀತಿಯೇ ಬೇರೆ. ನಮಲ್ಲಿರುವ ಪ್ರವಾಸೋದ್ಯಮ ನೀತಿಯೇ ಬೇರೆ. ಅಲ್ಲಿನವರ ಆಚಾರ, ವಿಚಾರ, ಸಂಸ್ಕೃತಿ ವಿಭಿನ್ನ. ಇಲ್ಲಿನ ಆಚಾರ, ವಿಚಾರವೇ ಬೇರೆ. ಒಂದಕ್ಕೊಂದು ಹೋಲಿಕೆ ಮಾಡುವುದು ಸರಿಯಲ್ಲ ಎಂದರು.
ಪ್ರವಾಸೋದ್ಯಮದಿಂದ ಬೊಕ್ಕಸಕ್ಕೆ ಭಾರೀ ಪ್ರಮಾಣದ ಲಾಭವೇನೂ ಬಂದಿಲ್ಲ. ಹೆಚ್ಚೆಂದರೆ ಶೇ.5 ರಿಂದ 8 ರಷ್ಟು ಲಾಭವಾಗಿರಬಹುದು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ ಪ್ರವಾಸೋದ್ಯಮ ತಾಣ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಇದಕ್ಕೂ ಮುನ್ನ ಈ ವಿಧೇಯಕದ ಮೇಲೆ ಸದಸ್ಯರಾದ ನವೀನ್ ಐವಾನ್ ಡಿಸೋಜ, ಎಚ್.ವಿಶ್ವನಾಥ್, ಹೇಮಲತಾ ನಾಯಕ್, ಬಿ.ಎಚ್.ಪೂಜಾರ್ ಮತ್ತಿತರರು ಮಾತನಾಡಿದರು.
ನಂತರ ಜಂಟಿ ಸಹಭಾಗಿತ್ವ ಯೋಜನೆಯಡಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಹಾಗೂ ಸಂಪನೂಲ ಹೊಂದಿಸುವ ಉದ್ದೇಶದ ೞಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ವಿಧೇಯಕ-2015ಕ್ಕೆ ವಿಧಾನಪರಿಷತ್ನಲ್ಲಿ ಅಂಗೀಕಾರ ದೊರೆಯಿತು.
ಪ್ರವಾಸೋದ್ಯಮ ಪ್ರೋತ್ಸಾಹಿಸುವುದರ ಜತೆಗೆ ಪ್ರವಾಸಿ ತಾಣಗಳ ಸ್ವಚ್ಛತೆ, ಸುರಕ್ಷತೆಗೆ ಆದ್ಯತೆ ಕೊಡುವುದೂ ಈ ವಿಧೇಯಕದಲ್ಲಿದೆ. ಪ್ರವಾಸಿ ಸ್ಥಳಗಳಲ್ಲಿ ಬಹುಭಾಷಾ ಪರಿಣತಿ ಹೊಂದಿರುವ ಮಾರ್ಗದರ್ಶಿಗಳನ್ನು ನಿಯುಕ್ತಿಗೊಳಿಸಲಾಗುವುದು. ಅಂಥವರಿಗೆ ಸೂಕ್ತ ತರಬೇತಿ ನೀಡಲಾಗುವುದು. ಪ್ರವಾಸಿ ಸ್ಥಳಗಳ ತುರ್ತು ಅಭಿವೃದ್ಧಿ ಕಾಮಗಾರಿಗಳಿಗೆ ಆಯಾ ಜಿಲ್ಲಾಧಿಕಾರಿಗಳ ಮೂಲಕವೂ ಹಣ ಬಿಡುಗಡೆ ಮಾಡಿಸಲಾಗುತ್ತಿದೆ.
ಈ ಹಿಂದೆ ವಿಧಾನಸಭೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಸೌಲಭ್ಯ ಮತ್ತು ನಿಯಂತ್ರಣ) ವಿಧೇಯಕ-2015 ಅನ್ನು ಅಂಗೀಕರಿಸಲಾಗಿತ್ತು. ಈ ಶಾಸನವು ಪ್ರವಾಸೋದ್ಯಮವನ್ನು ಉತ್ತೇಜಿಸುವ, ಸಾರ್ವಜನಿಕ-ಖಾಸಗಿ ಸಹಭಾಗಿತ್ವವನ್ನು ಬೆಂಬಲಿಸುವ ಮತ್ತು ಪ್ರವಾಸೋದ್ಯಮ ವ್ಯಾಪಾರವನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ.