ಬೆಂಗಳೂರು,ಆ.26- ನಾಡಿನೆಲ್ಲೆಡೆ ಇಂದು ಗೌರಿ ಹಬ್ಬವನ್ನು ಸಡಗರ, ಸಂಭ್ರಮ, ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಕಳೆದ ಒಂದು ವಾರದಿಂದಲೇ ಹಬ್ಬಕ್ಕೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಇಂದು ಮೊದಲನೆಯದಾಗಿ ಗಂಗಮನಿಗೆ ಪೂಜೆ ಸಲ್ಲಿಸಿ ನಂತರ ಗೌರಿಯನ್ನು ಮನೆಗೆ ತಂದು ತಮ್ಮ ಶಕ್ತಿಗನುಸಾರವಾಗಿ ಪೂಜೆ ಸಲ್ಲಿಸಿದರು.
ಕೆಲವರ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿದರೆ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಿದ್ದ ಗೌರಿಗೆ ಬಾಗಿನ ಅರ್ಪಿಸಿ ಪೂಜೆ ಸಲ್ಲಿಸಿದರು. ನವದಂಪತಿಗಳು ದೇವಾಲಯಕ್ಕೆ ತೆರಳಿ ಗೌರಿ ಬಾಗಿನ ಅರ್ಪಿಸುವ ಆಚರಣೆ ಇಂದಿಗೂ ಮುಂದುವರೆದುಕೊಂಡು ಬಂದಿದೆ.
ಮಹಿಳೆಯರಿಗೆ ಇದೊಂದು ಸಂಭ್ರಮದ ಹಬ್ಬವಾಗಿದ್ದು ತವರಿನ ಬಾಗಿನ ಪ್ರಮುಖವಾಗಿದೆ. ಸಹೋದರರು ಸಹೋದರಿಯರಿಗೆ, ತಾಯಿ ಮಗಳಿಗೆ ಬಾಗಿನ ಕೊಟ್ಟು ನೂರ್ಕಾಲ ಸುಖ, ಸಂತೋಷದಿಂದ ಜೀವನ ಸಾಗಿಸಿ ಎಂದು ಹರಸುವುದು ಹೆಣ್ಣುಮಕ್ಕಳಿಗೆ ಇದರ ಮುಂದೆ ದೊಡ್ಡ ಆಸ್ತಿ ಬೇರೊಂದಿಲ್ಲ ಎನ್ನಿಸುತ್ತದೆ.
ಸುಖ, ಶಾಂತಿ, ಆರೋಗ್ಯ ಕರುಣಿಸಲಿ ಎಂದು ತಮ ಮನೆಗಳಲ್ಲಿ ವಿಶೇಷವಾಗಿ ಗೌರಮ ದೇವಿಯನ್ನು ಪೂಜಿಸಿದ ದೃಶ್ಯಗಳು ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಕಂಡುಬಂದವು.
- ಕೇಸರಿ ಶಾಲು ಧರಿಸಿದ್ದ ಟ್ರಾವಲ್ಸ್ ಕಾರ್ಮಿಕ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಮೂವರು ಕಿಡಿಗೇಡಿಗಳ ಸೆರೆ
- ರೌಡಿ ಬಿಕ್ಲುಶಿವ ಕೊಲೆಯ ಪ್ರಮುಖ ಆರೋಪಿ ಜಗ್ಗಿ ಅರೆಸ್ಟ್
- ಆರ್ಎಸ್ಎಸ್ನ ಪ್ರಾರ್ಥನೆ ಮಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಸಿಎಂ ಡಿಕೆಶಿ
- “ಟೆಸ್ಟ್ ಕ್ರಿಕೆಟ್ನಿಂದ ಕೊಹ್ಲಿ ನಿವೃತ್ತಿ ನಿರ್ಧಾರದ ಹಿಂದೆ ಏನೋ ಅಸಾಮಾನ್ಯ ಇರಬಹುದು”
- ಬೆಂಗಳೂರಲ್ಲಿ ಇನ್ನು ಮುಂದೆ ಎಲ್ಲೆಂದರಲ್ಲಿ ಬೀದಿ ನಾಯಿಗಳಿಗೆ ಊಟ ಹಾಕುವಂತಿಲ್ಲ