ಬೆಂಗಳೂರು,ಆ.29- ತುಂಗಾಭದ್ರ ಜಲಾಶಯದಿಂದ ನದಿಗೆ 40 ಸಾವಿರ ಕ್ಯೂಸೆಕ್ನಿಂದ 70 ಸಾವಿರ ಕ್ಯೂಸೆಕ್ವರೆಗೂ ನೀರು ಬಿಡುವ ಸಾಧ್ಯತೆ ಇದ್ದು, ತುಂಗಾಭದ್ರ ಅಣೆಕಟ್ಟೆಯ ಕೆಳಭಾಗದಲ್ಲಿನ ನದಿಪಾತ್ರದ ಜನವಸತಿಗಳಲ್ಲಿ ಜಾಗ್ರತೆ ವಹಿಸಲು ಕೋರಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಈ ಮನವಿ ಮಾಡಿದೆ.
ತುಂಗಾಭದ್ರ ಜಲಾಶಯಕ್ಕೆ ಈಗ ಬರುತ್ತಿರುವ ಒಳಹರಿವು 36 ಸಾವಿರ ಕ್ಯೂಸೆಕ್ ಆಗಿದ್ದು, ಇದು 53 ಸಾವಿರ ಕ್ಯೂಸೆಕ್ಗೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇಂದು ಮಧ್ಯಾಹ್ನ 12 ಗಂಟೆಯಿಂದ ನದಿಗೆ ನೀರು ಬಿಡುವ ಪ್ರಮಾಣವನ್ನು ಹೆಚ್ಚಿಸಲಾಗುತ್ತದೆ.
ಒಳಹರಿವು 40 ಸಾವಿರ ಕ್ಯೂಸೆಕ್ಗಿಂತ 70 ಸಾವಿರ ಕ್ಯೂಸೆಕ್ವರೆಗೂ ಹೆಚ್ಚಾಗಬಹುದು. ಇದಕ್ಕೆ ಕಾರಣ ತುಂಗಾಜಲಾಶಯದಿಂದ 32 ಸಾವಿರ ಕ್ಯೂಸೆಕ್, ಭದ್ರ ಅಣೆಕಟ್ಟೆಯಿಂದ 11 ಸಾವಿರ ಕ್ಯೂಸೆಕ್ ಹಾಗೂ ವರದಾನದಿಯಿಂದ 9700 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಅಲ್ಲದೆ ತುಂಗಾಭದ್ರ ನದಿ ಜಲಾನಯನ ಭಾಗದಲ್ಲಿ ಮಳೆಯಾಗುತ್ತಿದ್ದು, ತುಂಗಾಭದ್ರ ಜಲಾಶಯದ ಒಳಹರಿವು 53 ಸಾವಿರ ಕ್ಯೂಸೆಕ್ಗೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
- ಮಸೀದಿಯಲ್ಲಿ ಗಣೇಶ ಪ್ರತಿಷ್ಠಾಪನೆ
- ಮೈಸೂರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಅರಮನೆ-ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
- ತನಿಖೆಯಾಗದೆ ಸಿಬಿಐನಲ್ಲಿ ಬಾಕಿ ಉಳಿದ 74 ಗಂಭೀರ ಪ್ರಕರಣಗಳು, ಮರೀಚಿಕೆಯಾದ ನ್ಯಾಯ
- ಹಣೆಗೆ ತಿಲಕ ಧರಿಸಿ ತರಗತಿಗೆ ಬರದಂತೆ ಪ್ರಾಶುಂಪಾಲ ಸುತ್ತೋಲೆ : ಪೋಷಕರಿಂದ ಪ್ರತಿಭಟನೆ
- ಕಾಳೇಶ್ವರಂ ಯೋಜನೆ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಿದ ರೇವಂತ್ ರೆಡ್ಡಿ