ಲಕ್ನೋ, ಆ.29– ವರದಕ್ಷಿಣೆ ಕಿರುಕುಳ ಎಂಬ ಪೆಡಂಭೂತ ಇನ್ನೂ ಕಾಡುತ್ತಲೆ ಇದೆ. ಇಂತಹ ಕಿರುಕುಳಕ್ಕೆ ಇದುವರೆಗೂ ಸಾವಿರಾರು ಮಹಿಳೆಯರು ಬಲಿಯಾಗಿದ್ದಾರೆ. ಇದೀಗ ಉತ್ತರ ಪ್ರದೇಶದ ಧನ ಪಿಶಾಚಿ ಪತಿ ಹಾಗೂ ಆತನ ಕುಟುಂಬದವರು 23 ವರ್ಷದ ಸೊಸೆಗೆ ವರದಕ್ಷಿಣೆ ಕಾಟ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿರುವ ಹೀನಾಯ ಕೃತ್ಯವೆಸಗಿದ್ದಾರೆ.
ನೊಯ್ಡಾದಲ್ಲಿ ಇತ್ತೀಚೆಗೆ ವರದಕ್ಷಿಣೆ ಕಿರುಕುಳ ನೀಡಿ ಬೆಂಕಿ ಹಚ್ಚಿ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಉತ್ತರ ಪ್ರದೇಶದಲ್ಲಿ ಇಂತಹದೊಂದು ಭಯಾನಕ ವರದಕ್ಷಿಣೆ ಕ್ರೌರ್ಯ ವರದಿಯಾಗಿದೆ. ಅಮ್ರೋಹಾ ಜಿಲ್ಲೆಯ ಕಲಖೇಡ ಎಂಬಲ್ಲಿ ಅತ್ತೆ ಹಾಗೂ ಮಾವ ಸೇರಿ 23 ವರ್ಷದ ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿ ಆಸಿಡ್ ಕುಡಿಸಿ ಹತ್ಯೆ ಮಾಡಿದ್ದಾರೆ.ಗುಲ್ಫಿಜಾ ಹತ್ಯೆಯಾದ ಮಹಿಳೆಯಾಗಿದ್ದಾಳೆ.
ಆಕೆ ಒಂದು ವರ್ಷದ ಹಿಂದೆ ದಿದೌಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲಖೇಡ ಗ್ರಾಮದ ಪರ್ವೇಜ್ ಎಂಬವನನ್ನು ಮದುವೆ ಆಗಿದ್ದಳು. ಆಕೆಯ ಅತ್ತೆ-ಮಾವ 10 ಲಕ್ಷ ರೂ. ನಗದು ಮತ್ತು ಕಾರನ್ನು ನೀಡುವಂತೆ ಒತ್ತಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಆ.11 ರಂದು ಗಲ್ಫಿಜಾಗೆ ಬಲವಂತವಾಗಿ ಆಸಿಡ್ ಕುಡಿಸಿದ್ದಾರೆ. ಆಕೆಯನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. 17 ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಮಹಿಳೆಯ ತಂದೆ ಫರ್ಕಾನ್ ನೀಡಿದ ದೂರಿನ ಮೇರೆಗೆ, ಪರ್ವೇಜ್, ಅಸಿಮ್, ಗುಲಿಸ್ತಾ, ಮೋನಿಶ್, ಸೈಫ್, ಡಾ. ಭೂರಾ ಮತ್ತು ಬಬ್ಬು ಎಂಬ ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ, ಎಲ್ಲಾ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
- ಮಸೀದಿಯಲ್ಲಿ ಗಣೇಶ ಪ್ರತಿಷ್ಠಾಪನೆ
- ಮೈಸೂರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ನಾಳೆ ಅರಮನೆ-ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ
- ತನಿಖೆಯಾಗದೆ ಸಿಬಿಐನಲ್ಲಿ ಬಾಕಿ ಉಳಿದ 74 ಗಂಭೀರ ಪ್ರಕರಣಗಳು, ಮರೀಚಿಕೆಯಾದ ನ್ಯಾಯ
- ಹಣೆಗೆ ತಿಲಕ ಧರಿಸಿ ತರಗತಿಗೆ ಬರದಂತೆ ಪ್ರಾಶುಂಪಾಲ ಸುತ್ತೋಲೆ : ಪೋಷಕರಿಂದ ಪ್ರತಿಭಟನೆ
- ಕಾಳೇಶ್ವರಂ ಯೋಜನೆ ಅಕ್ರಮವನ್ನು ಸಿಬಿಐ ತನಿಖೆಗೆ ವಹಿಸಿದ ರೇವಂತ್ ರೆಡ್ಡಿ