ಬೆಂಗಳೂರು,ಸೆ.2- ದೇವಸ್ಥಾನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳವು ಮಾಡುತ್ತಿದ್ದ ಹೊರ ರಾಜ್ಯದ ಮೂವರು ಖದೀಮರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿ 6.50 ಲಕ್ಷ ರೂ. ಮೌಲ್ಯದ 22 ವಿವಿಧ ದೇವರ ವಿಗ್ರಹಗಳನ್ನು ವಶಪಡಿಸಿಕೊಂಡಿದ್ದಾರೆ.
ಕನ್ನಮಂಗಲದ ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಪಶ್ಚಿಮ ಬಂಗಾಳ ಮೂಲದ ಮೊಹಮದ್ ರಬ್ಬಿ (22),ಮೊಹಮದ್ ಯೂಸೂಫ್ (20) ಮತ್ತು ಮೊಹಮದ್ ಬಾಬು (20) ಬಂಧಿತ ಆರೋಪಿಗಳು.ಈ ಮೂವರು ನಗರದಲ್ಲಿ ವಾಸವಾಗಿದ್ದುಕೊಂಡು ಇಬ್ಬರು ಕಾರು ವಾಷಿಂಗ್ ಕೆಲಸ ಹಾಗೂ ಮತ್ತೊಬ್ಬ ಚಿಂದಿ ಆಯುವ ಕೆಲಸ ಮಾಡುತ್ತಿದ್ದನು.
ಖಾಜಿಸೊನ್ನೇನಹಳ್ಳಿ ಗ್ರಾಮದಲ್ಲಿರುವ ಮುನೇಶ್ವರಸ್ವಾಮಿ ದೇವಸ್ಥಾನದ ಬಾಗಿಲು ಮುರಿದು ಒಳನುಗ್ಗಿ ದೇವರ ವಿಗ್ರಹಗಳು, ಹುಂಡಿಯ ಹಣ, ಗಂಟೆಗಳನ್ನು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದರು.
ಈ ಬಗ್ಗೆ ದೇವಾಲಯದ ಅರ್ಚಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆತನ ಬಳಿ ಕಟಿಂಗ್ ಪ್ಲೇಯರ್, ಆಕ್ಸೆಲ್ ಬ್ಲೇಡ್, ಕಬ್ಬಿಣದ ರಾಡ್ ಕಂಡು ಬಂದಿದೆ.
ನಂತರ ಆತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ, ಮತ್ತಿಬ್ಬರು ಸಹಚರರೊಂದಿಗೆ ಸೇರಿಕೊಂಡು ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದಾಗಿ ಹಾಗೂ ಹೊಸಕೋಟೆಯ ದೇವಸ್ಥಾನದಲ್ಲಿ ಮತ್ತು ಆವಲಹಳ್ಳಿಯಲ್ಲಿ ಆಟೋರಿಕ್ಷಾ ಕಳವು ಮಾಡಿರುವುದಾಗಿ ಹೇಳಿದ್ದಾನೆ.
ಆರೋಪಿಯ ಮಾಹಿತಿ ಮೇರೆಗೆ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಮೂವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದಾಗ, ಕಳವು ಮಾಡಿದ್ದ ದೇವರ ವಿಗ್ರಹಗಳನ್ನು ಈರಂಡಹಳ್ಳಿಯಲ್ಲಿರುವ ಗುಜರಿ ವ್ಯಾಪಾರಿಗೆ ನೀಡಿರುವುದಾಗಿ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾವನ್ನು ದಿಣ್ಣೂರು ಪ್ಲಾಂಟೇಷನ್ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಆರೋಪಿಗಳ ಮಾಹಿತಿಯಂತೆ ತನಿಖೆ ಮುಂದುವರೆಸಿದ ಪೊಲೀಸರು 22 ದೇವರ ವಿಗ್ರಹಗಳು ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 6.50 ಲಕ್ಷ ರೂ. ಗಳೆಂದು ಅಂದಾಜಿಸಲಾಗಿದೆ.ಆರೋಪಿಗಳ ಬಂಧನದಿಂದ ಹೊಸಕೋಟೆ, ಆವಲಹಳ್ಳಿ, ಸೂಲಿಬೆಲೆ ಹಾಗೂ ಕಾಡುಗೋಡಿಯ 4 ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಇನ್್ಸಪೆಕ್ಟರ್ ರಂಗಸ್ವಾಮಿ ಹಾಗೂ ಸಿಬ್ಬಂದಿ ತಂಡ ಯಶಸ್ವಿಯಾಗಿದೆ.
- ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ವಹಿಸುವ ಅಗತ್ಯವಿಲ್ಲ : ಪರಮೇಶ್ವರ್
- ಟಿ20 ಕ್ರಿಕೆಟ್ಗೆ ಮಿಚೆಲ್ ಸ್ಟಾರ್ಕ್ ವಿದಾಯ
- ಶಾಸಕ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ
- ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಹಾರೈಕೆ
- ಉದ್ಯಮಿ ಅಪಹರಿಸಿ ಜೀವ ಬೆದರಿಕೆ ಹಾಕಿ 3 ಲಕ್ಷ ರೂ. ಪಡೆದಿದ್ದ ನಾಲ್ವರು ರೌಡಿ ಸೇರಿ 6 ಮಂದಿ ಅರೆಸ್ಟ್