ನಿತ್ಯ ನೀತಿ : ಮಾನವನು ನಿಜವಾದ ಜ್ಞಾನದಿಂದ ವಂಚಿತನಾಗಿರುವುದು ಸಹಜ. ಏಕೆಂದರೆ, ಅವನನ್ನು ಅಜ್ಞಾನವು ಸದಾ ಕಾಲ ಸುತ್ತುವರಿದಿರುತ್ತದೆ.
ಪಂಚಾಂಗ : ಬುಧವಾರ, 24-09-2025
ವಿಶ್ವಾವಸುನಾಮ ಸಂವತ್ಸರ / ಅಯನ:ದಕ್ಷಿಣಾಯನ / ಋತು:ಸೌರ ಶರದ / ಮಾಸ: ಆಶ್ವಯುಜ / ಪಕ್ಷ:ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ಚಿತ್ರಾ / ಯೋಗ: ಐಂದ್ರ / ಕರಣ: ತೈತಿಲ
ಸೂರ್ಯೋದಯ – ಬೆ.06.09
ಸೂರ್ಯಾಸ್ತ – 06.15
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ನೀವು ಮಾಡುವ ತಪ್ಪಿನಿಂದಾಗಿ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವ ಪಾಠ ಕಲಿಯಬೇಕಾಗುತ್ತದೆ.
ವೃಷಭ: ಆರ್ಥಿಕವಾಗಿ ಹೆಚ್ಚು ಲಾಭ ಗಳಿಸಲು ಶ್ರಮ ಪಡಬೇಕಾದೀತು. ನಿಮ್ಮ ಲೆಕ್ಕಾಚಾರ ತಪ್ಪಾಗಬಹುದು.
ಮಿಥುನ:ಹಿತವಾದ ಮಾತುಗಳಿಂದ ಸಂಗಾತಿ ಅಥವಾ ಪ್ರೀತಿಪಾತ್ರರನ್ನು ಮೆಚ್ಚಿಸಲು ಪ್ರಯತ್ನಿಸುವಿರಿ.
ಕಟಕ: ಮಕ್ಕಳ ವಿದ್ಯಾಭ್ಯಾಸ ಅಥವಾ ವಿವಾಹದ ವಿಚಾರವಾಗಿ ಅನವಶ್ಯಕ ವಾದ ಮಾಡದಿರಿ.
ಸಿಂಹ: ನಿಮ್ಮ ಕೆಲಸಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲು ಇಂದು ಸಾಧ್ಯವಾಗುತ್ತದೆ.
ಕನ್ಯಾ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚಿನ ಪರಿಶ್ರಮ ವಹಿಸಬೇಕಾಗುತ್ತದೆ.
ತುಲಾ: ವ್ಯಾಪಾರ ಕ್ಷೇತ್ರದಲ್ಲಿ ಹೊಸ ಮಿತ್ರರು ಸಿಗುವರು.
ವೃಶ್ಚಿಕ: ಸಂಗಾತಿಯೊಂದಿಗೆ ಹೆಚ್ಚು ಸಮಯ ಕಳೆಯಲು ಬಯಸುವಿರಿ.
ಧನುಸ್ಸು: ಉದ್ಯಮಿಗಳು ತಮ್ಮ ಸಹೋದ್ಯೋಗಿ ಗಳೊಂದಿಗೆ ಭವಿಷ್ಯದ ಯೋಜನೆಗಳ ಬಗ್ಗೆ ಚಿಂತಿಸಿ.
ಮಕರ: ಸಹೋದ್ಯೋಗಿಗಳು ಗೌರವಾನ್ವಿತವಾಗಿ ವರ್ತಿಸುವುದರಿಮದ ಕೆಲಸ ಸರಾಗವಾಗಿ ಸಾಗಲಿದೆ.
ಕುಂಭ: ಅವಸರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದನ್ನು ತಪ್ಪಿಸಬೇಕಾಗುತ್ತದೆ.
ಮೀನ: ಒಡಹುಟ್ಟಿದವ ರೊಂದಿಗಿನ ಸಂಬಂಧ ಸುಧಾ ರಿಸುತ್ತದೆ. ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಿಗಲಿದೆ.