Tuesday, September 23, 2025
Homeರಾಷ್ಟ್ರೀಯ | Nationalಅಯೋಧ್ಯೆಯಲ್ಲಿ ಮಸೀದಿ ಯೋಜನೆ ತಿರಸ್ಕಾರ

ಅಯೋಧ್ಯೆಯಲ್ಲಿ ಮಸೀದಿ ಯೋಜನೆ ತಿರಸ್ಕಾರ

Ayodhya mosque plan fails to fulfil construction norms, rejected by Ayodhya Development Authority

ಅಯೋಧ್ಯೆ,ಸೆ.23- ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಗೆ ಬದಲಾಗಿ ಪ್ರಸ್ತಾಪಿಸಲಾದ ಮಸೀದಿಯ ವಿನ್ಯಾಸ ಯೋಜನೆಯನ್ನು ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ ತಿರಸ್ಕರಿಸಿದೆ. ವಿವಿಧ ಸರ್ಕಾರಿ ಇಲಾಖೆಗಳಿಂದ ಕಡ್ಡಾಯ ನಿರಾಕ್ಷೇಪಣಾ ಪ್ರಮಾಣಪತ್ರಗಳ ಕೊರತೆಯಿಂದಾಗಿ ಮಸೀದಿಯ ವಿನ್ಯಾಸ ಯೋಜನೆಯನ್ನು ಅನುಮೋದಿಸಲಾಗಿಲ್ಲ ಎಂದು ಮಾಹಿತಿ ಹಕ್ಕು ಪ್ರತಿಕ್ರಿಯೆಯಿಂದ ತಿಳಿದುಬಂದಿದೆ.

ನವೆಂಬರ್‌ 9, 2019ರಂದು ಸುಪ್ರೀಂಕೋರ್ಟ್‌ನ ಹೆಗ್ಗುರುತು ಅಯೋಧ್ಯಾ ತೀರ್ಪಿನ ಪ್ರಕಾರ, ಉತ್ತರಪ್ರದೇಶ ಸರ್ಕಾರವು ಮಸೀದಿ ನಿರ್ಮಾಣ ಮತ್ತು ಇತರ ಸೌಲಭ್ಯಗಳಿಗಾಗಿ ಅಯೋಧ್ಯಾ ಸುನ್ನಿ ಕೇಂದ್ರ ವಕ್‌್ಫ ಮಂಡಳಿಗೆ ಐದು ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು.

- Advertisement -

2020ರ ಆಗಸ್ಟ್‌ 3ರಂದು ಆಗಿನ ಅಯೋಧ್ಯಾ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅನುಜ್‌ಕುಮಾರ್‌ ಝಾ ಅವರು ಅಯೋಧ್ಯಾ ಬಳಿಯ ಧನ್ನಿಪುರ ಗ್ರಾಮದಲ್ಲಿ ಐದು ಎಕರೆ ಭೂಮಿಯನ್ನು ಸುನ್ನಿ ಕೇಂದ್ರ ವಕ್ಫ್ ಮಂಡಳಿಗೆ ವರ್ಗಾಯಿಸಿದ್ದರು. ಮಸೀದಿ ಟ್ರಸ್ಟ್‌ 2021ರ ಜೂನ್‌ 23ರಂದು ಈ ಭೂಮಿಯಲ್ಲಿ ನಿರ್ಮಾಣಕ್ಕಾಗಿ ವಿನ್ಯಾಸ ಯೋಜನೆಯನ್ನು ಅನುಮೋದಿಸಲು ಅರ್ಜಿ ಸಲ್ಲಿಸಿತ್ತು.

ಆದಾಗ್ಯೂ ಅಂದಿನಿಂದ ಯೋಜನಾ ಅನುಮೋದನೆ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿರಲಿಲ್ಲ. ವಿವಿಧ ಸರ್ಕಾರಿ ಇಲಾಖೆಗಳಿಂದ ಅಗತ್ಯ ಎನ್‌ಒಸಿಗಳ ಕೊರತೆಯಿಂದಾಗಿ ಮಸೀದಿಯ ವಿನ್ಯಾಸ ಯೋಜನೆಯನ್ನು ಅನುಮೋದಿಸಲಾಗಿಲ್ಲ ಎಂದು ಆರ್‌ಟಿಐ ಕಾರ್ಯಕರ್ತರನ್ನು ಉಲ್ಲೇಖಿಸಿ ಪತ್ರಿಕೆಯೊಂದು ವರದಿ ಮಾಡಿದೆ. ಈ ಪ್ರಮಾಣಪತ್ರಗಳಿಲ್ಲದೆ ಪ್ರಾಧಿಕಾರವು ಯೋಜನೆಯನ್ನು ಮುಂದುವರಿಸಲು ನಿರಾಕರಿಸಿತ್ತು.

ಸುಪ್ರೀಂಕೋರ್ಟ್‌ನ ಅದೇ ತೀರ್ಪಿನಡಿ ಅನುಮೋದಿಸಲಾದ ಅಯೋಧ್ಯೆಯಲ್ಲಿ ರಾಮಮಂದಿರದ ನಿರ್ಮಾಣವು ವೇಗವಾಗಿ ಪ್ರಗತಿಯಲ್ಲಿರುವ ಸಮಯದಲ್ಲೇ ಇದು ಬಹಿರಂಗಗೊಂಡಿದೆ. ಸುನ್ನಿ ಕೇಂದ್ರ ವಕ್ಫ್ ಮಂಡಳಿ ಮತ್ತು ಮಸೀದಿ ಟ್ರಸ್ಟ್‌ ಈ ವಿಷಯದ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ.

ಈ ವಿಷಯದಲ್ಲಿ ಮುಂದಿನ ಪ್ರಕ್ರಿಯೆ ಅಥವಾ ಸಮಯದ ಬಗ್ಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ. ರಾಮಮಂದಿರ ನಿರ್ಮಾಣ ಕಾರ್ಯವು ವೇಗವಾಗಿ ಪ್ರಗತಿಯಲ್ಲಿದೆ ಮತ್ತು ಮಸೀದಿ ಯೋಜನೆಯು ಇನ್ನೂ ಆರಂಭಿಕ ಹಂತಗಳಲ್ಲಿಯೇ ಸಿಲುಕಿಕೊಂಡಿದೆ ಎಂದು ಗಮನಿಸಿದಾಗ ಪರಿಸ್ಥಿತಿ ಮತ್ತಷ್ಟು ಜಟಿಲವಾಗಿದೆ. ಈ ಬಹಿರಂಗಪಡಿಸುವಿಕೆಯ ನಂತರ, ಸುನ್ನಿ ಕೇಂದ್ರ ವಕ್‌್ಫ ಮಂಡಳಿ ಮತ್ತು ಸಂಬಂಧಪಟ್ಟ ಪಕ್ಷಗಳು ಯೋಜನೆಯನ್ನು ತ್ವರಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತವೆ ಎಂದು ನಿರೀಕ್ಷಿಸಲಾಗಿದೆ.

RELATED ARTICLES

Latest News