ಬೆಂಗಳೂರು,ಸೆ.26- ರಾಜ್ಯ ಸರ್ಕಾರ ಮೂವರು ಐಎಎಸ್ ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಐಟಿಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಡಾ. ಎಕರೂಪ್ ಕೌರ್ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿರುವ ಹಿನ್ನೆಲೆಯಲ್ಲಿ ಐಟಿಬಿಟಿ ಮತ್ತು ವಿಜ್ಞಾನ-ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಹುದ್ದೆ ತೆರವಾಗಿತ್ತು.
ಮಂಜುಳಾ ಅವರಿಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಸಮವರ್ತಿತ ಪ್ರಭಾರದಲ್ಲಿರಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಪೂವಿತ ಎಸ್. ಅವರನ್ನು ವರ್ಗಾಯಿಸಲಾಗಿದೆ. ಶರತ್ ಬಿ. ಅವರ ವರ್ಗಾವಣೆಯಿಂದ ಈ ಹುದ್ದೆ ತೆರವಾಗಿತ್ತು.
ಮೂಲಸೌಕರ್ಯ ಅಭಿವೃದ್ಧಿ, ಬಂದರು, ಒಳನಾಡು, ಜಲಸಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ಗೋವಿಂದ ರೆಡ್ಡಿ ಅವರಿಗೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯದ ಆಯುಕ್ತರ ಹುದ್ದೆಯ ಸಮವರ್ತಿತ ಪ್ರಭಾರದಲ್ಲಿರಿಸಿ ಆದೇಶಿಸಲಾಗಿದೆ. ಈ ಹುದ್ದೆ ರವಿಕುಮಾರ್ ಎಂ.ಆರ್. ಅವರ ವರ್ಗಾವಣೆಯಿಂದ ಈ ಹುದ್ದೆ ತೆರವಾಗಿತ್ತು.