Friday, October 3, 2025
Homeರಾಜ್ಯಗ್ರೇಟರ್‌ ಬೆಂಗಳೂರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ

ಗ್ರೇಟರ್‌ ಬೆಂಗಳೂರು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ

BJP's important core committee meeting

ಬೆಂಗಳೂರು,ಸೆ.27- ಮುಂಬರುವ ಜಿಬಿಎ (ಗ್ರೇಟರ್‌ ಬೆಂಗಳೂರು ಅಥಾರಟಿ ) ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸುವ ಕುರಿತು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಂಜೆ ಬಿಜೆಪಿಯ ಮಹತ್ವದ ಕೋರ್‌ ಕಮಿಟಿ ಸಭೆ ನಡೆಯಲಿದೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಕೋರ್‌ ಕಮಿಟಿ ಸಭೆಗೆ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ ಅಗರ್‌ವಾಲ್‌, ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಹಾಗೂ ಪದಾಧಿಕಾರಿಗಳು ಭಾಗಿಯಾಗುವರು. ಮುಂಬರುವ ಜಿಬಿಎ ಚುನಾವಣೆಯಲ್ಲಿ ಪಕ್ಷವನ್ನು ಬಲಪಡಿಸಿ ಐದು ಪಾಲಿಕೆಗಳಲ್ಲೂ ಗೆಲ್ಲಲೇಬೇಕಾದ ರೂಪಿಸಲಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್‌, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರಿಗೆ ಹೊಂದುಕೊಂಡಿರುವ ಚಿಕ್ಕಬಳ್ಳಾಪುರ ಸೇರಿದಂತೆ ಐದು ಕ್ಷೇತ್ರಗಳನ್ನು ಬಿಜೆಪಿ ತನ್ನ ಬುಟ್ಟಿಗೆ ಹಾಕಿಕೊಂಡಿತ್ತು.ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಮತದಾರರು ಬಿಜೆಪಿಗೆ ಒಲವು ತೋರಿರುವುದರಿಂದ ಮೊದಲ ಬಾರಿಗೆ ಬಿಬಿಎಂಪಿ ವಿಭಜನೆಗೊಂಡು ಐದು ಮಹಾನಗರ ಪಾಲಿಕೆಯಾಗಿ ಗ್ರೇಟರ್‌ ಬೆಂಗಳೂರು ಅಥಾರಟಿ ಎಂಬ ಹೆಸರಿನೊಂದಿಗೆ ಅಸ್ತಿತ್ವಕ್ಕೆ ಬಂದಿದೆ.ಐದಕ್ಕೆ 5 ಪಾಲಿಕೆಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ನಗರದ ಜನತೆಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಬೆಂಗಳೂರಿನಲ್ಲಿ ಹದಗೆಟ್ಟಿರುವ ರಸ್ತೆಗಳು, ಮುಚ್ಚದೇ ಇರುವ ಗುಂಡಿಗಳು, ಹೆಚ್ಚುತ್ತಿರುವ ಅಪಘಾತ, ಬೆಂಗಳೂರು ಬಿಟ್ಟು ಕೆಲವು ಬಹುರಾಷ್ಟ್ರೀಯ ಕಂಪನಿಗಳು ಹೊರರಾಜ್ಯಕ್ಕೆ ಹೋಗಲು ಮುಂದಾಗಿರುವುದು, ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಹೀಗೆ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಲಿದೆ.

ಇನ್ನು ಕೋರ್‌ ಕಮಿಟಿ ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಚುನಾವಣೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಚುನಾವಣೆಯನ್ನು ಡಿಸೆಂಬರ್‌ ನಂತರ ನಡೆಸಲು ಸರ್ಕಾರ ಉದ್ದೇಶಿಸಿದೆ.ಇದೇ ಸಂದರ್ಭದಲ್ಲಿ ಚುನಾವಣೆ ಎದುರಾದರೆ ಹೆಚ್ಚಿನ ಸ್ಥಾನ ಗಳಿಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಪ್ರಮುಖರು ಚರ್ಚೆ ನಡೆಸಲಿದ್ದಾರೆ.

ಸರ್ಕಾರ ಪ್ರತಿದಿನ ಒಂದಿಲ್ಲೊಂದು ವಿವಾದದಲ್ಲಿ ಸಿಲುಕುತ್ತಿದ್ದು, ಜಾತಿ ಜನಗಣತಿಯಿಂದ ಉಂಟಾಗಿರುವ ಗೊಂದಲ, ಹಿಂದೂ ಧರ್ಮದ ಉಪಜಾತಿಗಳ ಜೊತೆ ಕ್ರಿಶ್ಚಿಯನ್‌ ಧರ್ಮದ ಸೇರ್ಪಡೆ, ಸರ್ಕಾರದ ಮೇಲೆ ಕೇಳಿ ಬರುತ್ತಿರುವ ಹಗರಣಗಳು, ಅಭಿವೃದ್ದಿ ಕುಂಠಿತ ಹೀಗೆ ಸಾಲು ಸಾಲು ವೈಫಲ್ಯಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಗೊತ್ತಾಗಲಿದೆ.

RELATED ARTICLES

Latest News