ಬೆಂಗಳೂರು,ಅ.17– ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್ಐಟಿ) ಎಡಿಜಿಪಿ ಚಂದ್ರಶೇಖರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ರದ್ದುಗೊಳಿ ಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸುವ ಮೂಲಕ ಕಾನೂನು ಹೋರಾಟದಲ್ಲಿ ಎಚ್.ಡಿ.ಕುಮಾರಸ್ವಾಮಿಗೆ ದೊಡ್ಡ ಗೆಲುವಾಗಿದೆ.
ಸರ್ಕಾರದ ಮೇಲನವಿ ಅರ್ಜಿಯನ್ನು ವಜಾಗೊಳಿಸುವಂತೆ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ ಮೇಲ್ನೋಟಕ್ಕೆ ಬೆದರಿಕೆ ಹಾಕಿರುವ ಬಗ್ಗೆ ದಾಖಲೆಗಳು ರುಜುವಾತಾ ಗುತ್ತಿಲ್ಲ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಕರಣದ ಹಿನ್ನಲೆ:
ಆಂಧ್ರಪ್ರದೇಶ ಮೂಲದ ಜಂತಕಲ್ ಮೈನಿಂಗ್ ಕಂಪನಿಯ ಸಹವರ್ತಿ ಸಂಸ್ಥೆಯಾಗಿರುವ ಶ್ರೀ ಸಾಯಿ ವೆಂಕಟೇಶ್ವರ್ ಮಿನರಲ್್ಸ ಕಂಪನಿಗೆ ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ಎನ್ಇಬಿ ರೇಂಜ್ನಲ್ಲಿ 550 ಎಕರೆ ಪ್ರದೇಶದಲ್ಲಿ ಗಣಿಗಾರಿಕೆ ಲೀಸ್ ನೀಡಲು ಪರವಾನಗಿಗೆ ಅನುಮೋದನೆ ಕಡತಕ್ಕೆ ಸಹಿ ಹಾಕಿದ್ದರು.
2007ರ ಅಕ್ಟೋಬರ್ 5ರಂದು ಸಹಿ ಹಾಕಲಾಗಿತ್ತು. ಈ ವೇಳೆ ಸಲ್ಲಿಕೆಯಾಗಿದ್ದ 29 ಅರ್ಜಿಗಳ ಪೈಕಿ ಕೊನೆಯದಾಗಿ ಸಲ್ಲಿಕೆಯಾಗಿದ್ದ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಅರ್ಜಿಯನ್ನು ಸರ್ಕಾರ ನಿಯಮಾವಳಿ ಉಲ್ಲಂಘಿಸಿ ಅನುಮೋದಿಸಿ ಮಂಜೂರು ಮಾಡಲಾಗಿತ್ತು ಎಂಬುದು ಕುಮಾರಸ್ವಾಮಿ ಅವರ ಮೇಲಿರುವ ಆರೋಪವಾಗಿತ್ತು.
ಈ ಪ್ರಕರಣದಲ್ಲಿ ಹೆಚ್ಚುವರಿ ಸಾಕ್ಷ್ಯಾಧಾರಗಳು ದೊರೆತಿದ್ದರಿಂದ ಕಾನೂನು ಕ್ರಮಕೈಗೊಳ್ಳಲು ಅನುಮತಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಎಸ್ಐಟಿ ಮುಖ್ಯಸ್ಥರಾಗಿರುವ ಎಂ ಚಂದ್ರಶೇಖರ್ ಮನವಿ ಮಾಡಿ ದ್ದರು.
ಇದರಿಂದ ಕೆರಳಿದ ಕುಮಾರ ಸ್ವಾಮಿ ಅವರು ಸೆಪ್ಟೆಂಬರ್ 28 ಮತ್ತು 29ರಂದು ಮಾಧ್ಯಮಗೋಷ್ಠಿ ನಡೆಸಿ ತನ್ನ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಆರೋಪ ಮಾಡಿ, ಬೆದರಿಕೆ ಹಾಕಿದ್ದಾರೆ. ಕರ್ನಾಟಕ ಕೇಡರ್ನಿಂದ ಬೇರೆ ರಾಜ್ಯಕ್ಕೆ ಕಳುಹಿಸುವುದಾಗಿ ಮೌಖಿಕವಾಗಿ ಬೆದರಿಕೆ ಹಾಕಿದ್ದು, ತಮ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡಿ, ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ.
ತಾನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಕಲಿ ವೈದ್ಯಕೀಯ ದಾಖಲೆ ಪಡೆದು ಕರ್ನಾಟಕ ಕೇಡರ್ಗೆ ಸೇರ್ಪಡೆಯಾಗಿರುವುದಾಗಿ ಆರೋಪಿದ್ದಲ್ಲದೆ ತಾನು ಲಂಚ ಸ್ವೀಕರಿಸುತ್ತಿರುವುದಾಗಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಚಂದ್ರಶೇಖರ್ ದೂರಿನಲ್ಲಿ ತಿಳಿಸಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಚಂದ್ರ ಶೇಖರ್ ಪತ್ರ ಬರೆದಿದ್ದರು. ಆ ಬಳಿಕ, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ, ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ್ದರು.50 ಕೋಟಿ ನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ವಿಜಯ ತಾತ ನೀಡಿದ ದೂರು ಆಧರಿಸಿ, ಕುಮಾರಸ್ವಾಮಿ ವಿರುದ್ಧ ಇತ್ತೀಚೆಗಷ್ಟೇ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.