Sunday, October 19, 2025
Homeರಾಜ್ಯಗುತ್ತಿಗೆದಾರರನ್ನು ಬೆದರಿಸುವ ಆಟ ನಡೆಯುವುದಿಲ್ಲ : ಆರ್‌.ಅಶೋಕ್‌ ವಾಗ್ದಾಳಿ

ಗುತ್ತಿಗೆದಾರರನ್ನು ಬೆದರಿಸುವ ಆಟ ನಡೆಯುವುದಿಲ್ಲ : ಆರ್‌.ಅಶೋಕ್‌ ವಾಗ್ದಾಳಿ

DK Shivakumar threat to contractors : R. Ashok attacks

ಬೆಂಗಳೂರು,ಅ.19-ಗುತ್ತಿಗೆ ದಾರರ ಮೇಲೆ ಸರ್ಕಾರದ ಬೆದರಿಕೆ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರು ಬೇಕಾದರೆ ಹೈಕಮಾಂಡ್‌ ಮುಂದೆ ಹೋಗಲಿ. ಅದಕ್ಕೆ ನಾನೇ ಸಮಯ ಅವಕಾಶ ಕೊಡಿಸುತ್ತೇನೆ ಎಂದು ಡಿ.ಕೆ.ಶಿವ ಕುಮಾರ್‌ ಹೇಳಿದ್ದರು.

ಇದಕ್ಕೆ ತಮ ಎಕ್‌್ಸ ಖಾತೆಯಲ್ಲಿ ತಿರುಗೇಟು ನೀಡಿರುವ ಅಶೋಕ್‌,ಬಾಕಿ ಬಿಲ್‌ ಕೊಡಿ ಎಂದು ಕೇಳಿದರೆ ಅದು ಧಮ್ಕಿ ಹೇಗೆ ಆಗುತ್ತದೆ ಡಿಸಿಎಂ ಶಿವಕುಮಾರ್‌ ಅವರೇ? ಬಾಕಿ ಬಿಲ್‌ ಕೊಡದಿದ್ದರೆ ತಮ ಹಕ್ಕಿಗಾಗಿ ಮುಷ್ಕರ ಮಾಡಬೇಕಾಗುತ್ತದೆ ಎಂದು ಹೇಳುವುದು ಧಮ್ಕಿ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಬಹುಶಃ ಕಾಂಗ್ರೆಸ್‌‍ನವರು ಜೇಬಿನಲ್ಲಿ ಇಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರಿಗೆ ಮುಷ್ಕರ, ಹೋರಾಟ ಮಾಡುವ ಹಕ್ಕಿಲ್ಲ ಅನ್ನಿಸುತ್ತದೆ. ಆದರೆ ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಸಂವಿಧಾನದಲ್ಲಿ ನಾಗರಿಕರು, ಗುತ್ತಿಗೆದಾರರು ತಮ ಹಕ್ಕಿಗಾಗಿ ಸರ್ಕಾರವನ್ನು ಪ್ರಶ್ನಿಸಲೂಬಹುದು, ಮುಷ್ಕರ ಮಾಡಬಹುದು, ಹೋರಾಟವನ್ನೂ ಮಾಡಬಹುದು ಎಂದು ಹೇಳಿದ್ದಾರೆ.

ಇಷ್ಟಕ್ಕೂ ಗುತ್ತಿಗೆದಾರರ ಬಿಲ್‌ ಯಾಕೆ ಕ್ಲಿಯರ್‌ ಮಾಡುತ್ತಿಲ್ಲ? ಒಂದಾ ಪಾಪರ್‌ ಸರ್ಕಾರದ ಬಳಿ ದುಡ್ಡಿಲ್ಲದೆ ಸಂಪೂರ್ಣವಾಗಿ ದಿವಾಳಿ ಆಗಿರಬೇಕು. ಇಲ್ಲಾ ನಿಮ ಕಮಿಷನ್‌ ಬೇಡಿಕೆ ಈಡೇರಿಸಲಾಗದೆ ಗುತ್ತಿಗೆದಾರರು ನೀವು ಕೇಳುತ್ತಿರುವ ಪರ್ಸೆಂಟೇಜ್‌ಗೆ ಒಪ್ಪದೇ ಇರಬಹುದು ಎಂದು ವ್ಯಂಗ್ಯವಾಡಿದ್ದಾರೆ.

ರಸ್ತೆಗುಂಡಿಗಳ ದುಸ್ಥಿತಿ ಬಗ್ಗೆ ದನಿ ಎತ್ತಿದ ಉದ್ಯಮಿಗಳಿಗೆ ಧಮ್ಕಿ ಹಾಕಿ ಅವಮಾನ ಮಾಡಿದ್ದಾಯ್ತು, ಈಗ ಗುತ್ತಿಗೆದಾರರಿಗೆ ಧಮ್ಕಿ ಹಾಕುತ್ತಿದೆ ಈ ಲಜ್ಜೆಗೆಟ್ಟ ಕಾಂಗ್ರೆಸ್‌‍ ಸರ್ಕಾರ. ಪರಿಸ್ಥಿತಿ ಹೀಗೆ ಮುಂದುವರೆದರೆ ಕರ್ನಾಟಕಕ್ಕೆ ಯಾವ ಉದ್ಯಮಗಳೂ ಬರುವುದಿಲ್ಲ, ಯಾವ ಗುತ್ತಿಗೆದಾರರು ಸರ್ಕಾರದ ಕೆಲಸ ಮಾಡುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

RELATED ARTICLES

Latest News