Sunday, October 26, 2025
Homeರಾಜ್ಯಬಸ್‌‍ಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ

ಬಸ್‌‍ಗಳಲ್ಲಿ ಸುರಕ್ಷತಾ ಕ್ರಮ ಪರಿಶೀಲನೆಗೆ ಕಟ್ಟುನಿಟ್ಟಿನ ಸೂಚನೆ

Strict instructions to review safety measures in buses

ಬೆಂಗಳೂರು, ಅ.26- ಕರ್ನೂಲ್‌ ಬಳಿ ಸಂಭವಿಸಿದ ಬಸ್‌‍ ಬೆಂಕಿ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಾರಿಗೆ ಸಂಸ್ಥೆಗಳ ಬಸ್‌‍ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ.

ಕರ್ನೂಲ್‌ ಬಸ್‌‍ ದುರಂತ ಪ್ರಕರಣ ಅತ್ಯಂತ ದುಃಖಕರವಾದ ಸಂಗತಿಯಾಗಿದೆ. ಇಂತಹ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಿರಲಿ. ಈ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನೂ ಸಹ ಪಾಲಿಸಬೇಕಾಗಿದೆ. ಈ ಹಿಂದೆ ಸಾರಿಗೆ ಸಚಿವನಾಗಿದ್ದಾಗಲೂ ಕೂಡ ಹಾವೇರಿ ಬಳಿ ಖಾಸಗಿ ಬಸ್‌‍ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದರು.

ಆ ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ಬಸ್‌‍ಗಳು, ಕಾಂಟ್ರಾಕ್ಟ್‌ ಗ್ಯಾರೇಜ್‌ ಬಸ್‌‍ಗಳು, ಖಾಸಗಿ ಟೂರಿಸ್ಟ್‌ ಬಸ್‌‍ಗಳು, ಟೆಂಪೋ ಟ್ರಾವೆಲರ್‌ರ‍ಸ, ಶಾಲಾ ವಾಹನಗಳು ಸೇರಿ ಸುಮಾರು 50 ಸಾವಿರ ವಾಹನಗಳಲ್ಲಿ ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಮತ್ತು ದ್ವಾರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಪರಿಶೀಲಿಸಲು ವಿಶೇಷ ಅಭಿಯಾನ ಕೈಗೊಂಡಿದ್ದರಿಂದ ಹಲವು ಬಸ್‌‍ಗಳಲ್ಲಿ ಲೋಪದೋಷಗಳು ಗಮನಕ್ಕೆ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ ಕಡ್ಡಾಯವಾಯಿತು ಎಂದರು.

ಬಸ್‌‍ಗಳಲ್ಲಿ ಯಾವುದೇ ವಾಣಿಜ್ಯ ಸರಕು, ಲಗೇಜ್‌ ಸಾಗಿಸುವ ಸಂದರ್ಭದಲ್ಲಿ ಬೆಂಕಿಸ್ಪರ್ಶಕ್ಕೆ ಸುಲಭವಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟಿಸುವ ವಸ್ತುಗಳನ್ನು ಸಾಗಿಸದಂತೆ ನಿಗಾ ವಹಿಸಬೇಕು. ಎಲ್ಲ ಎಸಿ ಬಸ್‌‍ಗಳಲ್ಲಿ ತುರ್ತು ಸಂದರ್ಭದಲ್ಲಿ ಕಿಟಕಿಗಳನ್ನು ಒಡೆಯಲು ಸಹಾಯವಾಗುವಂತೆ ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್‌ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿಗಳು ಮಲಗಲು ಅವಕಾಶ ನೀಡಬಾರದು. ಬಸ್‌‍ಗಳ ನವೀಕರಣದ ಸಂದರ್ಭದಲ್ಲಿ ಪರಿಶೀಲನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಯಾವುದೇ ನ್ಯೂನ್ಯತೆಗಳು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ ಪ್ರಥಮ ಆದ್ಯತೆ. ಪ್ರಾಣಹಾನಿಗೆ ಯಾವುದೇ ರೀತಿಯಿಂದಲೂ ನಷ್ಟಭರಿಸಲು ಸಾಧ್ಯವಿಲ್ಲ. ಆದರೆ, ಈ ಕೂಡಲೇ ಬಸ್‌‍ಗಳಲ್ಲಿನ ಸುರಕ್ಷತೆ ಪರಿಶೀಲನೆಗೆ ತಂಡಗಳನ್ನು ರಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಎಸ್‌‍ಆರ್‌ಟಿಸಿ, ಬಿಎಂಟಿಸಿ, ವಾಯುವ್ಯ ರಸ್ತೆ ಸಾರಿಗೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರುಗಳಿಗೆ ಮತ್ತು ಸಾರಿಗೆ ಇಲಾಖೆಯ ಸುರಕ್ಷತಾ ವಿಭಾಗದ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

RELATED ARTICLES

Latest News