ಬೆಂಗಳೂರು,ಡಿ.16- ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಈ ಸಂಬಂಧ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಕೊಡುಗೆ ಕರ್ನಾಟಕ ಹಾಗೂ ಭಾರತಕ್ಕೆ ಅಪಾರವಾದದ್ದು. ರಾಜ್ಯ ಸರ್ಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ಇವರ ಹೆಸರನ್ನು ನಾಮಕರಣ ಮಾಡುವಂತೆ ಶಿಫಾರಸ್ಸು ಮಾಡಬೇಕು ಎಂದು ಕೋರಿದ್ದಾರೆ.
ವಿದೇಶಿ ವಿವಿ ಪದವಿ ಮಾನ್ಯವಲ್ಲ ; ಯುಜಿಸಿ
CBI ತನಿಖೆಗೆ ಅನುಮತಿ ವಾಪಸಾತಿ ವಿರುದ್ಧ ನಾನು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದೆ. ಭ್ರಷ್ಟಾಚಾರದ ವಿರುದ್ಧ ದಿನಂಪ್ರತಿ ಮಾತನಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭ್ರಷ್ಟ್ರಾಚಾರಿಯ ರಕ್ಷಣೆಗೆ ನಿಂತಿರುವುದು ದುರಂತ ಎಂದು ಇದೇ ವೇಳೆ ಬೇಸರ ವ್ಯಕ್ತಪಡಿಸಿದ್ದಾರೆ.