Wednesday, April 29, 2026
Homeರಾಜ್ಯಸಫಾರಿ ವೇಳೆ ಮೊಬೈಲ್‌ ಬಳಕೆ ಕುರಿತು ಅರಣ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

ಸಫಾರಿ ವೇಳೆ ಮೊಬೈಲ್‌ ಬಳಕೆ ಕುರಿತು ಅರಣ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

Forest Department takes important decision on mobile phone use during safaris

ಬೆಂಗಳೂರು,ಏ.27- ವನ್ಯಜೀವಿ ಸಂರಕ್ಷಣೆ ಮತ್ತು ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸಫಾರಿ ವೇಳೆ ಮೊಬೈಲ್‌ ಬಳಕೆಗೆ ಕಟ್ಟುನಿಟ್ಟಿನ ನಿಯಂತ್ರಣ ಹೇರಿದೆ.

ಸಫಾರಿಗೆ ಹೋಗುವ ಎಲ್ಲರೂ ತಮ ಮೊಬೈಲ್‌‍ಗಳನ್ನು ಏರೋಪ್ಲೇನ್‌ ಮೋಡ್‌ನಲ್ಲಿ ಇಡಬೇಕು ಹಾಗೂ ಸೆಲ್ಫಿ ತೆಗೆದುಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕ್ರಮವು ಸುಪ್ರೀಂಕೋರ್ಟ್‌ ನೀಡಿದ ಇತ್ತೀಚಿನ ನಿರ್ದೇಶನದ ನಂತರ ಕೈಗೊಳ್ಳಲಾಗಿದೆ.

ಸಫಾರಿ ಪ್ರದೇಶಗಳಲ್ಲಿ ಮೊಬೈಲ್‌ ಬಳಕೆಯಿಂದ ವನ್ಯಜೀವಿಗಳಿಗೆ ಅಡ್ಡಿಯುಂಟು ಮಾಡುವುದು ಹಾಗೂ ಪ್ರವಾಸಿಗರ ನಡುವೆ ಅನವಶ್ಯಕ ಗದ್ದಲ ಉಂಟಾಗುವುದನ್ನು ತಡೆಯುವುದು ಈ ನಿಯಮದ ಉದ್ದೇಶವಾಗಿದೆ.

ರಣಥಂಬೋರ್‌, ಸರಿಸ್ಕಾ ಮತ್ತು ಇತರ ಹುಲಿ ಮೀಸಲು ಪ್ರದೇಶಗಳ ಸಫಾರಿ ವಲಯಗಳಲ್ಲಿ ಈಗಾಗಲೇ ನಿಯಮವನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿದ್ದರೂ, ಕರ್ನಾಟಕ ಇನ್ನೂ ಅದನ್ನು ಸಂಪೂರ್ಣವಾಗಿ ಅನುಸರಿಸಿರಲಿಲ್ಲ. ಇದೀಗ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ.

ಸಫಾರಿ ವೇಳೆ ಯಾವುದೇ ರೀತಿಯ ಅಡ್ಡಿಪಡಿಸುವ ಅಂಶಗಳನ್ನು ತಪ್ಪಿಸಬೇಕು. ಅತಿಥಿಗಳು ಮತ್ತು ಸಿಬ್ಬಂದಿ ಸೇರಿದಂತೆ ಸಫಾರಿಗೆ ಹೋಗುವ ಎಲ್ಲರೂ ತಮ ಮೊಬೈಲ್‌ ಏರೋಪ್ಲೇನ್‌ ಮೋಡ್‌ನಲ್ಲಿ ಇಡಲು ನಿರ್ದೇಶಿಸಿ ಆದೇಶಗಳನ್ನು ಹೊರಡಿಸಲಾಗಿದೆ.

ಕರ್ನಾಟಕದಲ್ಲಿ ಸಫಾರಿಗಳು ನಿಯಂತ್ರಿತವಾಗಿ ನಡೆಯುತ್ತಿರುವುದರಿಂದ ಇತರ ರಾಜ್ಯಗಳಂತೆ ಸಂಪೂರ್ಣ ಮೊಬೈಲ್‌ ನಿಷೇಧ ಅಗತ್ಯವಿಲ್ಲ. ಆದರೆ, ಪ್ರಾಣಿಗಳಿರುವ ಸ್ಥಳದ ಮಾಹಿತಿ ಹಂಚಿಕೊಳ್ಳುವುದು, ಲೈವ್‌ ಸಂವಹನ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಪ್ರಾಣಿಗಳ ಸ್ಥಳ ಮಾಹಿತಿ ಹೊರಬಂದರೆ ಒಂದೇ ಸ್ಥಳದಲ್ಲಿ ಹೆಚ್ಚಿನ ವಾಹನಗಳು ಸೇರುವ ಸಾಧ್ಯತೆ ಇದೆ. ಇದರಿಂದ ವನ್ಯಜೀವಿಗಳಿಗೆ ಅಡ್ಡಿಯುಂಟು ಮಾಡಿದಂತಾಗುತ್ತದೆ.

ಸುಪ್ರೀಂ ಕೋರ್ಟ್‌ ನಿರ್ದೇಶನವನ್ನು 2026ರ ಮೇ 17ರೊಳಗೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.ಸಫಾರಿ ವಾಹನ ಚಾಲಕರು ಹಾಗೂ ಮಾರ್ಗದರ್ಶಕರಿಗೂ ಈ ನಿಯಮ ಅನ್ವಯವಾಗಬೇಕು. ವೈರ್‌ಲೆಸ್‌‍ ರೇಡಿಯೋಗಳ ಬಳಕೆಗೆ ವಿಸ್ತರಿಸಬೇಕು. ಈ ಕ್ರಮಗಳು ಹುಲಿ ಕಾಣಿಸಿಕೊಂಡ ಸ್ಥಳಗಳಲ್ಲಿ ಸಫಾರಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರದಂತೆ ನೋಡಿಕೊಳ್ಳುತ್ತವೆ.

ಸಂರಕ್ಷಿತ ಪ್ರದೇಶಗಳು ಮತ್ತು ಹುಲಿ ಅಭಯಾರಣ್ಯಗಳಲ್ಲಿ 4ಜಿ ಟವರ್‌ಗಳ ನಿರ್ಮಾಣವು ಹೆಚ್ಚುತ್ತಿದ್ದು, ಆತಂಕವನ್ನು ಎದುರು ಮಾಡುತ್ತಿವೆ. ಇದು ವನ್ಯಜೀವಿ ಸಂರಕ್ಷಣಾ ಗುರಿಗಳಿಗೆ ಹೊಂದಿಕೆಯಾಗುವುದಿಲ್ಲ. ಅಂತಹ ಪ್ರಸ್ತಾಪಗಳನ್ನು ತಿರಸ್ಕರಿಸಬೇಕು ಎನ್ನುತ್ತಾರೆ ಅರಣ್ಯ ಇಲಾಖೆಯ ಅಧಿಕಾರಿಗಳು.

ಫೆಬ್ರವರಿ 17, 2026 ರೊಳಗೆ ಪರಿಸರ-ಸೂಕ್ಷ್ಮ ವಲಯಗಳನ್ನು ಒಳಗೊಂಡಂತೆ ಹುಲಿ ಅಭಯಾರಣ್ಯಗಳ ಸಂಪೂರ್ಣ ಪ್ರದೇಶವನ್ನು ಶಬ್ದ ಮಾಲಿನ್ಯ (ನಿಯಂತ್ರಣ) ನಿಯಮಗಳು, 2000 ರ ಅಡಿಯಲ್ಲಿ ಸೈಲೆನ್ಸ್ ಝೋನ್‌ ಎಂದು ಘೋಷಿಸಬೇಕೆಂದು ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ.

ಎಲ್ಲಾ ಅರಣ್ಯಗಳನ್ನು ಸೈಲೆನ್‌್ಸ ಝೋನ್‌ ಗಳಾಗಿ ಘೋಷಿಸುವುದನ್ನು ಪರಿಗಣಿಸುವಂತೆ ನ್ಯಾಯಾಲಯವು ಸರ್ಕಾರಗಳಿಗೆ ಸೂಚಿಸಿವೆ. ಆದ್ದರಿಂದ, ದೇಶಾದ್ಯಂತ ಅನ್ವಯವಾಗುವ ನವೆಂಬರ್‌ 2025 ರ ತೀರ್ಪಿನಲ್ಲಿರುವ ನಿರ್ದೇಶನಗಳನ್ನು ರಾಜ್ಯ ಸರ್ಕಾರ ಪಾಲಿಸಬೇಕು ಎಂಬ ಅಭಿಪ್ರಾಯ ಇಲಾಖೆಯಲ್ಲಿ ವ್ಯಕ್ತವಾಗಿದೆ.

RELATED ARTICLES

Latest News