ನಿತ್ಯ ನೀತಿ : ಮನಸ್ಸು ಬಿಚ್ಚಿ ಮಾತನಾಡಿದರೆ ಸಂಬಂಧಗಳು ಗಟ್ಟಿಯಾಗುತ್ತವೆ. ಮನಸ್ಸು ಚುಚ್ಚಿ ಮಾತನಾಡಿದರೆ ಸಂಬಂಧಗಳು ಕಳಚಿ ಬೀಳುತ್ತವೆ.
ಪಂಚಾಂಗ : ಸೋಮವಾರ, 20-04-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ಗ್ರೀಷ್ಮ / ಮಾಸ: ವೈಶಾಖ / ಪಕ್ಷ: ಶುಕ್ಲ / ತಿಥಿ: ತೃತೀಯಾ / ನಕ್ಷತ್ರ: ರೋಹಿಣಿ / ಯೋಗ: ಸೌಭಾಗ್ಯ / ಕರಣ: ವಣಿಜ್
ಸೂರ್ಯೋದಯ – 06.06
ಸೂರ್ಯಾಸ್ತ – 6.33
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.
ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತವೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ಖರ್ಚಿನ ಮೇಲೆ ನಿಯಂತ್ರಣವಿರಲಿ.
ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.
ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.
ಮೀನ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
