ಚಿತ್ರದುರ್ಗ,ಜು.20– ಮದುವೆ ಯಾಲಿಲ್ಲ ಎಂದು ನೊಂದ ಗೃಹ ರಕ್ಷಕ ದಳದ ಸಿಬ್ಬಂದಿ ನೇಣು ಹಾಕಿಕೊಂಡು ಆತಹತ್ಯೆಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲುರು ತಾಲೂಕಿನ ಜೆಬಿ ಹಳ್ಳಿಯಲ್ಲಿ ನಡೆದಿದೆ.
ತಿರುಮಲ (31) ಮೃತ ಹೋಂ ಗಾರ್ಡ್. ತಿರುಮಲ ರಾಂಪುರ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ತಮ ಮದುವೆ ಬಗ್ಗೆ ತಲೆಕೆಡಿಸಿಕೊಂಡಿದ್ದರು.
ಹಲವು ವರ್ಷಗಳಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಎಂದು ತಿಳಿದುಬಂದಿದೆ.
ಇತ್ತೀಚಿಗೆ ಮೂರು ಕಡೆ ಹೆಣ್ಣು ನೋಡಲು ತೆರಳಿದ್ದು, ಹೆಣ್ಣಿನ ಕಡೆಯವರಿಂದ ತಿರಸ್ಕಾರಗೊಂಡ ಪರಿಣಾಮ ಹೆಚ್ಚು ಘಾಸಿಯಾಗಿತ್ತು.ವಯಸ್ಸಾಗುತ್ತಿದೆ ಮದುವೆ ಕಷ್ಟ ಎಂದು ಮನನೊಂದು, ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಬಿಎಂಟಿಸಿ ಬಸ್ ಚಾಲಕನೊಂದಿಗೆ ಕಾನ್ಸ್ಟೆಬಲ್ ಕಿರಿಕ್
- ಕೆ.ಆರ್.ಮಾರ್ಕೆಟ್ನಲ್ಲಿ ಹೈಟೆಕ್ ಪಾರ್ಕಿಂಗ್ ಲಾಟ್
- ಕಾರು ನಿಲ್ಲಿಸಿ ಮನವಿ ಸ್ವೀಕರಿಸಿದ ಸಿಎಂ
- ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರುಪಾಲು
- ಹೃದಯಾಘಾತದಿಂದ ರೌಡಿ ಸಾವು
