ನವದೆಹಲಿ, ಜ.31-ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತ ಎಲ್ಲಾ ರಂಗಗಳಲ್ಲಿ ವಿಫಲವಾಗಿದೆ ಎಂದು ಪ್ರತಿಭಟಿಸಲು ಸಂಸತ್ತಿನ ಉಭಯ ಸದನಗಳ ಉದ್ದೇಶಿಸಿ ರಾಷ್ಟ್ರಪತಿಗಳ ಭಾಷಣವನ್ನು ಬಿಆರ್ಎಸ್ ಹಾಗು ಆಮ್ ಆದ್ಮಿ ಪಕ್ಷ ಬಹಿಷ್ಕರಿಸಿದೆ.
ರಾಜ್ಯಸಭೆಯಲ್ಲಿ ಭಾರತ್ ರಾಷ್ಟ್ರ ಸಮಿತಿಯ ಉಭಯ ಸದನದ ನಾಯಕರೂ ಆಗಿರುವ ಕೇಶವರಾವ್ ಮಾತನಾಡಿ ತಮ್ಮ ಪಕ್ಷವುಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಎಲ್ಲಾ ರಂಗಗಳಲ್ಲಿ ಆಡಳಿತದ ವೈಫಲ್ಯಕಂಡಿದೆ ಎಂದು ಆರೋಪಿಸಿ ಬಹಿಷ್ಕರಿಸುತ್ತಿದೆ ಎಂದು ಹೇಳಿದರು.
ಬಿಆರ್ಎಸ್ ಮುಖ್ಯಸ್ಥ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ರಾಷ್ಟ್ರ ರಾಜಕಾರಣದಲ್ಲಿಕಾಣಿಸಿಕೊಂಡಿದ್ದು ಮತ್ತು ದೇಶಾದ್ಯಂತ ವಿರೋಧ ಪಕ್ಷಗಳ ಮೈತ್ರಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ.
ಭಾರತೀಯರ ಮೇಲೆ ಖಲಿಸ್ತಾನಿ ಉಗ್ರರ ದಾಳಿಗೆ ಖಂಡನೆ
ಎಎಪಿ ನಾಯಕ ಮತ್ತು ಸಂಸದ ಸಂಜಯ್ ಸಿಂಗ್ ಅವರು ಮಾತನಾಡಿ , ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನಮ್ಮ ಪಕ್ಷ ಗೌರವಿಸುತ್ತದೆ ಆದರೆ ಸರ್ಕಾರದ ನಿಲುವು ಮತ್ತು ನೀಡಿದ್ದ ಭರವಸೆಗಳನ್ನು ಈಡೇರಿಸದ ಕಾರಣ ನಾವು ಸಂಸತ್ತಿನ ಜಂಟಿ ಅಧಿವೇಶನವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೇಸ್ ಗೈರು : ಪ್ರತಿಕೂಲ ಹವಾಮಾನದ ಕಾರಣ ಶ್ರೀನಗರದಿಂದ ಬರಲು ವಿಮಾನ ವಿಳಂಬವಾದ ಕಾರಣ ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹಲವಾರು ಕಾಂಗ್ರೆಸ್ ಸಂಸದರು ಭಾಗವಹಿಸಲು ಸಾಧ್ಯವಾಗುವುದಿಲ್ಲ. ಎಂದು ಕಾಂಗ್ರೇಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.
ಪಾಕ್ ಮಸೀದಿ ಸ್ಪೋಟದಲ್ಲಿ ಸತ್ತವರ ಸಂಖ್ಯೆ 80ಕ್ಕೆ ಏರಿಕೆ
ಸೋಮವಾರ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಕಾರ್ಯಕ್ರಮಗಳಿಗಾಗಿ ಹಲವಾರು ಕಾಂಗ್ರೆಸ್ ನಾಯಕರು ಮತ್ತು ಸಂಸದರು ಶ್ರೀನಗರದಲ್ಲಿದ್ದಾರೆ. ಪ್ರತಿಕೂಲ ಹವಾಮಾನದ ಕಾರಣ ವಿಮಾನ ಸೇವೆ ವಿಳಂಬವಾದ ಕಾರಣ, ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಮತ್ತು ಇತರ ಅನೇಕ ಕಾಂಗ್ರೆಸ್ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
AAP, BRS, boycott, President, Murmu, address, Parliament,