Tuesday, May 21, 2024
Homeರಾಷ್ಟ್ರೀಯಬಿಜೆಪಿಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ

ಬಿಜೆಪಿಗೆ ನಟಿ ಗೌತಮಿ ತಡಿಮಲ್ಲ ಗುಡ್‍ಬೈ

ಚೆನ್ನೈ,ಅ.23- ತನ್ನ ಆಸ್ತಿಯನ್ನು ಕಬಳಿಸಿದ ವ್ಯಕ್ತಿಗೆ ಪಕ್ಷದವರೇ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿ ದಕ್ಷಿಣ ಭಾರತದ ಹೆಸರಾಂತ ಚಿತ್ರನಟಿ ಗೌತಮಿ ತಡಿಮಲ್ಲ ಬಿಜೆಪಿಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಗುಡ್‍ಬೈ ಹೇಳಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸುದೀರ್ಘ ಹಾಗೂ ಭಾವನಾತ್ಮಕವಾದ ಪತ್ರ ಬರೆದಿರುವ ಗೌತಮಿ ತಡಿಮಲ್ಲ, ಅತ್ಯಂತ ಭಾರವಾದ ಹೃದಯದಿಂದ ಪಕ್ಷ ಬಿಡುವ ತೀರ್ಮಾನಕ್ಕೆ ಬಂದಿದ್ದೇನೆ, ಸಹಕರಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

ನನ್ನ ಆಸ್ತಿಯನ್ನೇ ಕಬಳಿಸಿದ ವ್ಯಕ್ತಿಗೆ ಪಕ್ಷದವರೇ ಬೆನ್ನೆಲುಬಾಗಿ ನಿಂತಿದ್ದಾರೆಂದರೆ ಯಾರನ್ನು ನಂಬಬೇಕು. ಯಾರನ್ನು ನಂಬಬಾರದು ಎಂಬುದೇ ತಿಳಿಯುತ್ತಿಲ್ಲ. ಪಕ್ಷವು ನೀಡಿದ ಜವಾಬ್ದಾರಿಯನ್ನು ತಕ್ಕಮಟ್ಟಿಗೆ ನಿಭಾಯಿಸಿದ್ದೇನೆ ಎಂಬ ತೃಪ್ತಿ ಎಂದು ಹೇಳಿದ್ದಾರೆ.

ಪ್ಯಾರಾ ಏಷ್ಯನ್ ಗೇಮ್ಸ್​​ನಲ್ಲಿ ಭಾರತೀಯರ ಪದಕ ಭೇಟೆ ಶುರು

ನಾನು 25 ವರ್ಷಗಳ ಹಿಂದೆ ರಾಷ್ಟ್ರ ನಿರ್ಮಾಣಕ್ಕೆ ತನ್ನ ಪ್ರಯತ್ನಗಳನ್ನು ಕೊಡುಗೆ ನೀಡಲು ಪಕ್ಷಕ್ಕೆ ಸೇರಿದ್ದೆ. ನನ್ನ ಜೀವನದಲ್ಲಿ ನಾನು ಎದುರಿಸಿದ ಎಲ್ಲಾ ಸವಾಲುಗಳ ಹೊರತಾಗಿಯೂ, ನಾನು ಆ ಬದ್ಧತೆಯನ್ನು ಗೌರವಿಸಿದ್ದೇನೆ. ಆದರೂ ಇಂದು ನಾನು ನನ್ನ ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ನಿಂತಿದ್ದೇನೆ. ಪಕ್ಷ ಮತ್ತು ಮುಖಂಡರಿಂದ ಯಾವುದೇ ರೀತಿಯ ಬೆಂಬಲ ಪಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ನನ್ನ ನಂಬಿಕೆ ಮುರಿದು ದ್ರೋಹ ಬಗೆದಿರುವ ವ್ಯಕ್ತಿಗೆ ಕೆಲವರು ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ ಎಂದು ಗೌತಮಿ ತಡಿಮಲ್ಲ ಪತ್ರದಲ್ಲಿ ಆರೋಪಿಸಿದ್ದಾರೆ.

ವಿಶ್ವಾಸ ದ್ರೋಹ:
ನಾನು 17 ನೇ ವಯಸ್ಸಿನಿಂದ ಕೆಲಸ ಮಾಡುತ್ತಿದ್ದೇನೆ. ನನ್ನ ವೃತ್ತಿಜೀವನವು 37 ವರ್ಷಗಳ ಕಾಲ ಸಿನಿಮಾ, ದೂರದರ್ಶನ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ವ್ಯಾಪಿಸಿದೆ. ಈ ವಯಸ್ಸಿನಲ್ಲಿ ಆರ್ಥಿಕವಾಗಿ ಸುಭದ್ರವಾಗಿರಲು ಮತ್ತು ನನ್ನ ಮಗಳ ಭವಿಷ್ಯಕ್ಕಾಗಿ ನಾನು ನನ್ನ ಇಡೀ ಜೀವನ ಕೆಲಸ ಮಾಡಿದ್ದೇನೆ. ನಾನು ಮತ್ತು ನನ್ನ ಮಗಳು ಸ್ಥಿರವಾಗಿ ಮತ್ತು ಸುರಕ್ಷಿತವಾಗಿರಬೇಕಾದ ಸ್ಥಳದಲ್ಲಿ ನಾನು ಈಗ ನಿಂತಿದ್ದೇನೆ.

ಮಾನಸಿಕ ನೆಮ್ಮದಿ ಕಳೆದುಕೊಂಡ ಭಾರತದಲ್ಲಿರುವ ಪ್ಯಾಲೆಸ್ಟೀನಿಯಸ್ ವಿದ್ಯಾರ್ಥಿಗಳು

ಆದರೆ ಸಿ.ಅಳಗಪ್ಪನ್ ನನಗೆ ಮೋಸ ಮಾಡಿ ನನ್ನ ಹಣ, ಆಸ್ತಿ, ದಾಖಲೆಗಳನ್ನು ದೋಚಿದ್ದಾರೆ ಎಂದು ಹೇಳಿದ್ದಾರೆ. ಈ ವಿಚಾರದಲ್ಲಿ ನ್ಯಾಯಕ್ಕಾಗಿ ಮುಖ್ಯಮಂತ್ರಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಗೌತಮಿ ತಡಿಮಲ್ಲ ಮನವಿ ಮಾಡಿದ್ದಾರೆ. ಎಫ್‍ಐಆರ್ ದಾಖಲಾಗಿದೆ, ಮುಖ್ಯಮಂತ್ರಿ ಮತ್ತು ಪೊಲೀಸ್ ಅಧಿಕಾರಿಗಳು ನನಗೆ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆ ನನಗಿದೆ ಎಂದು ತಡಿಮಲ್ಲ ಹೇಳಿದ್ದಾರೆ.

RELATED ARTICLES

Latest News