ಬೆಂಗಳೂರು,ಜು.16- ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಇಂದು ಕೆಲ ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದರು. ಶಾಸಕರ ಜೊತೆ ಸಭೆ ನಡೆಸಿ ಅವರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದ್ದ ಸುರ್ಜೆವಾಲ ಅವರು
ಇಂದು ಸಚಿವರ ಜೊತೆ ಸಭೆ ನಡೆಸಿದ್ದಾರೆ.
ಇಂದು ಬೆಳಗ್ಗೆ ಒಬ್ಬೊಬ್ಬ ಸಚಿವರ ಜೊತೆ ಪ್ರತ್ಯೇಕವಾಗಿ ಸಭೆ ನಡೆಸಿ, ಆಡಳಿತ ವೈಖರಿ, ಖಾತೆ ನಿರ್ವಹಣೆ, ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರೊಂದಿಗಿನ ಒಡನಾಟ, ಪಕ್ಷ ಸಂಘಟನೆಗೆ ನೀಡಬೇಕಾದ ಒತ್ತು ಮೊದಲಾದ ವಿಚಾರಗಳ ಬಗ್ಗೆ ಅಭಿಪ್ರಾಯ ಪಡೆದಿದ್ದಾರೆ.
ಇಂದು ಬೆಳಗ್ಗೆ ಸಚಿವ ಈಶ್ವರ್ ಖಂಡ್ರೆ ಅವರೊಂದಿಗೆ ಸಭೆ ನಡೆಸಿ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ. ಅರಣ್ಯ ಒತ್ತುವರಿ ತೆರವು, ಅರಣ್ಯ ಸಂರಕ್ಷಣೆಗೆ ಆದ್ಯತೆ, ವನ್ಯಜೀವಿ ಸಂರಕ್ಷಣೆಗೆ ಒತ್ತು ಕೊಡುವ ವಿಚಾರದಲ್ಲಿ ಇಲಾಖೆಯಿಂದ ಕೈಗೊಂಡಿರುವ ಮಾಹಿತಿಗಳನ್ನು ಸಚಿವರು ಸುರ್ಜೆವಾಲ ಅವರಿಗೆ ನೀಡಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.
ಅರಣ್ಯ ಇಲಾಖೆ ಬಗ್ಗೆ ಈಶ್ವರ್ ಖಂಡ್ರೆ ಅವರಿಂದ ಮಾಹಿತಿ ಪಡೆದ ಸುರ್ಜೆವಾಲ ಅವರು, ಬೀದರ್ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದಲ್ಲಿ ಭಿನ್ನಮತಕ್ಕೆ ಅವಕಾಶವಿಲ್ಲದಂತೆ ಎಲ್ಲರನ್ನು ಒಟ್ಟಿಗೆ ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈಶ್ವರ ಖಂಡ್ರೆ ಅಲ್ಲದೆ ಸಚಿವರಾದ ಕೃಷ್ಣ ಭೈರೇಗೌಡ, ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್, ಚೆಲುವರಾಯಸ್ವಾಮಿ, ಪರಮೇಶ್ವರ್, ಎಚ್.ಕೆ.ಪಾಟೀಲ್ ಅವರ ಜೊತೆಯೂ ಸುರ್ಜೆವಾಲ ಸಭೆ ನಡೆಸಿ ಪ್ರತ್ಯೇಕವಾಗಿ ಅಭಿಪ್ರಾಯವನ್ನು ಸಂಗ್ರಹಿಸಲಿದ್ದಾರೆ.
- ಶೀಘ್ರದಲ್ಲೇ ಶುಭಸುದ್ದಿ : ಬಿಜೆಪಿಗೆ ಮರಳುವರೇ ಯತ್ನಾಳ್..?
- ಬಾಂಗ್ಲಾದಲ್ಲಿ ಧ್ವಂಸಗೊಳಿಸಲಾಗಿರುವ ಸತ್ಯಜಿತ್ ರೇ ಪೂರ್ವಿಕರ ಮನೆ ಪುನರ್ನಿರ್ಮಾಣ ಭಾರತ ಮನವಿ
- ಪಹಲ್ಗಾಮ್ ದಾಳಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಭಾರಿ ಕುಸಿತ
- ತುಮುಲ್ನಿಂದ ತಿರುಪತಿಗೆ ತುಪ್ಪ ರವಾನೆ
- ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದಂತೆ ಕುಸಿದು ಬಿದ್ದು ಪ್ರಾಣಬಿಟ್ಟ ಯುವಕ