ನವದೆಹಲಿ,ಜು.24- ಸುಮಾರು 160 ಪ್ರಯಾಣಿಕರೊಂದಿಗೆ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡ ಘಟನೆ ಇಲ್ಲಿ ನಡೆದಿದೆ.
ದಿಲ್ಲಿಯಿಂದ ಹೊರಟಿದ್ದ ವಿಮಾನದಲ್ಲಿ ಪೈಲೆಟ್ ತಾಂತ್ರಿಕ ಸಮಸ್ಯೆ ಗುರುತ್ತಿಸಿದ ನಂತರ ಸುರಕ್ಷತಾ ದೃಷ್ಟಿಯಿಂದ ಮೇಲೆ ಹಾರುವ ಸಂದರ್ಭದಲ್ಲಿ ನಿಂತಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ತಿಳಿಸಿದ್ದಾರೆ.
ಕಾಕ್ ಪಿಟ್ನಲ್ಲಿ ವೇಗದ ನಿಯತಾಂಕಗಳನ್ನು ಪ್ರದರ್ಶಿಸುವ ಪರದೆಗಳಲ್ಲಿ ದೋಷ ಕಂಡುಬಂದ ಕಾರಣ ಪೈಲಟ್ ಟೇಕ್ ಆಫ್ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಪ್ರಯಾಣಿಕರನ್ನು ಕೆಳಗಿಳಿಸಿ ಮುಂಬೈಗೆ ಹೊರಟಿದ್ದ ಪರ್ಯಾಯ ವಿಮಾನದಲ್ಲಿ ಕಳುಹಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತಾ ಸುರಕ್ಷತೆ ಅತ್ಯಂತ ಮುಖ್ಯ ಎಂದು ವಿಮಾನಯಾನ ಸಂಸ್ಥೆ ಪುನರುಚ್ಚರಿಸಿದೆ.
- ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕ ಪಡಬೇಕಾಗಿಲ್ಲ : ಸಚಿವ ಚಲುವರಾಯಸ್ವಾಮಿ
- ಕ್ಷುಲ್ಲಕ ವಿಚಾರಕ್ಕೆ ಕಿರಿಕ್ : ಹಲ್ಲೆಗೊಳಗಾಗಿದ್ದ ಫುಡ್ ಡೆಲಿವರಿ ಬಾಯ್ ಸಾವು
- ಇತಿಹಾಸದಲ್ಲೇ ಇದೇ ಮೊದಲು : ಮಹಿಳಾ ಚೆಸ್ ವಿಶ್ವಕಪ್ ಫಿನಾಲೆಯಲ್ಲಿ ಭಾರತೀಯರು ಮುಖಾಮುಖಿ
- ರಾಜ್ಯಸಭಾ ಸದಸ್ಯರಾಗಿ ನಟ ಕಮಲಹಾಸನ್ ಪ್ರಮಾಣ ವಚನ ಸ್ವೀಕಾರ
- ಚುನಾವಣಾ ಆಯೋಗದ ವಿರುದ್ಧ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ