ನವದೆಹಲಿ,ಜು.24- ಸುಮಾರು 160 ಪ್ರಯಾಣಿಕರೊಂದಿಗೆ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ಸ್ಥಗಿತಗೊಂಡ ಘಟನೆ ಇಲ್ಲಿ ನಡೆದಿದೆ.
ದಿಲ್ಲಿಯಿಂದ ಹೊರಟಿದ್ದ ವಿಮಾನದಲ್ಲಿ ಪೈಲೆಟ್ ತಾಂತ್ರಿಕ ಸಮಸ್ಯೆ ಗುರುತ್ತಿಸಿದ ನಂತರ ಸುರಕ್ಷತಾ ದೃಷ್ಟಿಯಿಂದ ಮೇಲೆ ಹಾರುವ ಸಂದರ್ಭದಲ್ಲಿ ನಿಂತಿದೆ ಎಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ವಕ್ತಾರರು ತಿಳಿಸಿದ್ದಾರೆ.
ಕಾಕ್ ಪಿಟ್ನಲ್ಲಿ ವೇಗದ ನಿಯತಾಂಕಗಳನ್ನು ಪ್ರದರ್ಶಿಸುವ ಪರದೆಗಳಲ್ಲಿ ದೋಷ ಕಂಡುಬಂದ ಕಾರಣ ಪೈಲಟ್ ಟೇಕ್ ಆಫ್ ಅನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ ಎಂದು ಮೂಲವೊಂದು ತಿಳಿಸಿದೆ.
ಪ್ರಯಾಣಿಕರನ್ನು ಕೆಳಗಿಳಿಸಿ ಮುಂಬೈಗೆ ಹೊರಟಿದ್ದ ಪರ್ಯಾಯ ವಿಮಾನದಲ್ಲಿ ಕಳುಹಿಸಲಾಯಿತು ಎಂದು ವಕ್ತಾರರು ತಿಳಿಸಿದ್ದಾರೆ. ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸುತ್ತಾ ಸುರಕ್ಷತೆ ಅತ್ಯಂತ ಮುಖ್ಯ ಎಂದು ವಿಮಾನಯಾನ ಸಂಸ್ಥೆ ಪುನರುಚ್ಚರಿಸಿದೆ.
- ಡಾ.ವಿಷ್ಣುವರ್ಧನ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ನೀಡಲು ಸಂಪುಟ ನಿರ್ಣಯ.
- ಇಲ್ಲಿದೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್
- ವರದಕ್ಷಿಣೆ ಕಿರುಕುಳ ಆರೋಪ ಸತ್ಯಕ್ಕೆ ದೂರ : ಎಸ್.ನಾರಾಯಣ್ ಸ್ಪಷ್ಟನೆ
- ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸಿ : ನಿರ್ಮಲಾನಂದನಾಥ ಸ್ವಾಮೀಜಿ
- ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಬಸ್ ಚಾಲಕನಿಗೆ ಬೆತ್ತಲೆಗೊಳಿಸಿ ಥಳಿತ